Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...