Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...