Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...