Homeಎಕಾನಮಿಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

- Advertisement -
- Advertisement -

ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ ಸಾಮರ್ಥ್ಯದ ಅಭಾವದಿಂದ ಉದ್ಯೋಗ ಕಡಿತವಾಗುತ್ತಿದೆ ಎಂದು ಭಾರತದ ಇನ್‌ಫೋಸಿಸ್ ಹೇಳುತ್ತಿದೆ.

ವಾಸ್ತವ ಏನೇ ಇರಲಿ, ಭಾರತದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗಿಗಳ ಸೇವೆ ಕಡಿತ ಮುಂದುವರಿಯುತ್ತಿದೆ. ಕಂಪನಿಯ ಪುನರ್‌ರಚನೆಗೆ ಅನುಕೂಲ ಎಂಬ ಅಭಿಪ್ರಾಯದೊಂದಿಗೆ ಕಾಗ್ನಿಜೆಂಟ್ 7 ಸಾವಿರ ಉದ್ಯೋಗ ಕಡಿತಗೊಳಿಸಿದ್ದರೆ, ಕ್ಯಾಪ್ ಜೆಮಿನಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದೆ.

ಈ ಮಧ್ಯೆ, ಇನ್‌ಫೋಸಿಸ್ ಕಂಪನಿಯು ವಿವಿಧ ಹಂತಗಳಲ್ಲಿ ಅಂದರೆ 2200-ಹಿರಿಯ ವ್ಯವಸ್ಥಾಪಕರು, 4 ಸಾವಿರದಿಂದ 10 ಸಾವಿರ ವರೆಗೆ ಅಸೋಷಿಯೇಟ್ ಹಾಗೂ ಮಧ್ಯಮ ಹಂತ ಹಾಗೂ 50 ಹಿರಿಯ ಕಾರ್ಯನಿರ್ವಾಹಕರನ್ನು ಸೇವೆಯಿಂದ ಕೈ ಬಿಟ್ಟು ಮನೆಗೆ ಕಳಿಸಲಾಗಿದೆ.

ಅತ್ಯುನ್ನತ ಕಾರ್ಯ ಸಾಮರ್ಥ್ಯದ ಸಂಘಟನೆಯಾಗಿ ಇನ್‌ಫೋಸಿಸ್, “ಉದ್ಯೋಗಿಗಳ ಕಾರ್ಯ ಸಾಮರ್ಥ್ಯವು ಇಡೀ ಕಂಪನಿ ವ್ಯವಹಾರದ ಪ್ರಮುಖ ಭಾಗವಾಗಿದೆ. ಅಂದಮಾತ್ರಕ್ಕೆ, ಇಡೀ ಕಂಪನಿಯ ವಿವಿಧ ಹಂತದ ಎಲ್ಲ ಉದ್ಯೋಗಿಗಳನ್ನು ಸಾಮೂಹಿಕವಾಗಿ ತೆಗೆದು ಹಾಕಲಾಗುತ್ತಿದೆ ಎಂದರ್ಥವಲ್ಲ’ ಎಂದು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಆದರೆ, ಈವರೆಗೆ ಎಷ್ಟು ಉದ್ಯೋಗಿಗಳನ್ನು ತೆಗೆದು ಹಾಕಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

ಕಳೆದ ಕೆಲವು ತಿಂಗಳಿಂದ ಉತ್ತಮ ಗುಣಮಟ್ಟದ ಕಾರ್ಯಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಇಷ್ಟವಿರದಿದ್ದರೂ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆಗೊಳಿಸುವುದು (ಇನ್‌ವಾಲೆಂಟರಿ ಅಟ್ರಿಷನ್ಸ್) ಅನಿವಾರ್ಯ. ಏಕಾಏಕಿಯಾಗಿ ಅವರ ಉದ್ಯೋಗವನ್ನು ಕಸಿಯಲಾಗಿಲ್ಲ. ಕಳೆದ 6 ತಿಂಗಳು ಅಥವಾ 2 ವರ್ಷದಿಂದ ಕಾರ್ಯ ಸಾಮರ್ಥ್ಯ ತೋರದ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಐಎಎನ್‌ಎಸ್ ಸಂಸ್ಥೆಗೆ ಇನ್ ಫೋಸಿಸ್ ಸ್ಪಷ್ಟಪಡಿಸಿದೆ.

ಈ ಹಿಂದೆ ಇನ್‌ಫೋಸಿಸ್ ಘೋಷಿಸಿದಂತೆ, ಉದ್ಯೋಗಿಗಳ ಕಾರ್ಯ ಸಾಮರ್ಥ್ಯದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ಉದ್ಯೋಗಿಗಳ ಕಡಿತವು 2018 ಸೆ.30ರವರೆಗೆ ಶೇ.22.2 ಹಾಗೂ 2019ರ ಜೂ.30 ರವರೆಗೆ ಶೇ. 23.4 ಹಾಗೂ 2019ರ ಸೆ. 30ರವರೆಗೆ ಶೇ. 21.7ರಷ್ಟಿದೆ. ಇನ್ ಫೋಸಿಸ್ ನಲ್ಲಿ ಶೇ.23.4 ರಷ್ಟು ಪ್ರಮಾಣದಲ್ಲಿ ಉದ್ಯೋಗ ಕಡಿತಗೊಳಿಸಿದ್ದೇ ಅತಿ ಹೆಚ್ಚು.

ಆದರೆ, ಕ್ಯ್ಯಾಪ್‌ಜೆಮಿನಿ ಸಂಸ್ಥೆಯಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಿಗಳನ್ನು 90 ದಿನಗಳವರೆಗೆ ಅನುಮತಿಸಲಾಗುತ್ತದೆ. ಈ ಅವಧಿಯಲ್ಲಿ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಾಗುತ್ತದೆ. ಹೀಗೆ ರೂಪಿಸಲು ಸಾಧ್ಯವಾಗದ ಉದ್ಯೋಗಿಗಳಿಗೆ ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.

ಇನ್‌ಫೋಸಿಸ್ ತನ್ನ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒಂದು ವಾರದ ನಂತರ ಕ್ಯಾಪ್‌ಜೆಮಿನಿ ಕಂಪನಿಯು ಮುಂದಿನ ಮೂರು ತಿಂಗಳಲ್ಲಿ 5 ಸಾವಿರದಿಂದ 7 ಸಾವಿರ ವರೆಗೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಘೋಷಿಸಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಷನ್ಸ್ (ಸಿಟಿಎಸ್) ತನ್ನ ಕಂಪನಿಯ 10 ಸಾವಿರದಿಂದ 12 ಸಾವಿರ ವರೆಗೆ ಹಿರಿಯ ಅಸೋಷಿಯೇಟ್ಸ್‌ಗಳನ್ನು ಕೆಲಸದಿಂದ ತೆಗೆಯುವ ಹಾಗೂ 5 ಸಾವಿರ ಜನರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸುವ ಯೋಜನೆಯಲ್ಲಿದೆ. ಈ ಕುರಿತು, ಕಾಗ್ನಿಜೆಂಟ್ ಸಿಇಓ ಬ್ರಿಯನ್ ಹಂಪ್ರಿಸ್ ಹೇಳಿದ್ದಾರೆ.

ಎಕಾನಾಮಿಕ್ಸ್ ಟೈಮ್ಸ್ ವರದಿಯನ್ವಯ, ದೂರವಾಣಿ ವಲಯದಲ್ಲೂ ಸುಮಾರು 1 ಲಕ್ಷ ಉದ್ಯೋಗಿಗಳು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಕೆಂದರೆ, ಬಿಎಸ್‌ಎನ್‌ಎಲ್ ಸಂಸ್ಥೆಯು ಸುಮಾರು 20 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಾವತಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...