Homeಮುಖಪುಟಅಮೆರಿಕಾದಲ್ಲಿ ಕೆಲಸ ಕಳೆದುಕೊಂಡು ಪರದಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳು

ಅಮೆರಿಕಾದಲ್ಲಿ ಕೆಲಸ ಕಳೆದುಕೊಂಡು ಪರದಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳು

- Advertisement -
- Advertisement -

ಯುಎಸ್‌ನಲ್ಲಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳು ಇದೀಗ ಗೂಗಲ್, ಮೈಕ್ರೋಸಾಫ್ಟ್ ಮತ್ತು ಅಮೆಜಾನ್‌ನಂತಹ ಕಂಪನಿಗಳಲ್ಲಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದೀಗ ತಮ್ಮ ಕೆಲಸದ ವೀಸಾಗಳ ಮುಕ್ತಾಯದ ನಂತರ, ಅದೇ ದೇಶದಲ್ಲಿ ಉಳಿಯಲು ತಮ್ಮ ಕೆಲಸದ ವೀಸಾಗಳ ಅಡಿಯಲ್ಲಿ ನಿಗದಿತ ಅವಧಿಯೊಳಗೆ ಹೊಸ ಉದ್ಯೋಗವನ್ನು ಹುಡುಕಲು ಹೆಣಗಾಡುತ್ತಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ಪ್ರಕಾರ, ಕಳೆದ ವರ್ಷ ನವೆಂಬರ್‌ನಿಂದ ಗೂಗಲ್, ಮೈಕ್ರೋಸಾಫ್ಟ್, ಫೇಸ್‌ಬುಕ್ ಮತ್ತು ಅಮೆಜಾನ್‌ನಂತಹ ಕಂಪನಿಗಳು ಸೇರಿದಂತೆ ಸುಮಾರು 2,00,000 ಐಟಿ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ.

ಶೇ. 30 ರಿಂದ 40 ರಷ್ಟು ಭಾರತೀಯ ಐಟಿ ಉದ್ಯೊಗಿಗಳು ಅವರಲ್ಲಿ ಹೆಚ್ಚಿನವರು H-1B ಮತ್ತು L1 ವೀಸಾಗಳಲ್ಲಿದ್ದಾರೆ. H-1B ವೀಸಾವು ವಲಸೆ ರಹಿತ ವೀಸಾ ಆಗಿದ್ದು, ಇದು US ಕಂಪನಿಗಳಿಗೆ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಕೆಲಸಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಭಾರತ ಮತ್ತು ಚೀನಾದಂತಹ ದೇಶಗಳಿಂದ ಪ್ರತಿ ವರ್ಷ ಹತ್ತು ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಈ ತಂತ್ರಜ್ಞಾನ ಕಂಪನಿಗಳು ಇದನ್ನು ಅನುಸರಿಸುತ್ತವೆ.

L-1A ಮತ್ತು L-1B ವೀಸಾಗಳು ಬೇರೆ ಸಂಸ್ಥೆಗಳಿಂದ ವರ್ಗಾವಣೆಯಾಗಿ ಬಂದಿರುವ ಮುಖ್ಯಸ್ಥರು ಅಥವಾ ವ್ಯವಸ್ಥಾಪಕರಿಗೆ ಮತ್ತು ವಿಶೇಷಜ್ಞಾನದಿಂದ ಬಂದಿರುವವರಿಗೆ ಕೊಡಲಾಗುತ್ತದೆ.

H-1B ಮತ್ತು L1 ನಂತಹ ವಲಸಿಗರಲ್ಲದವರ ಕೆಲಸದ ವೀಸಾಗಳನ್ನು ಹೊಂದಿರುವ ಗಣನೀಯ ಸಂಖ್ಯೆಯ ಭಾರತೀಯ IT ಉದ್ಯೋಗಿಗಳು, ಇದೀಗ US ನಲ್ಲಿ ಉಳಿಯಲು ನಿಗದಿತ ಕೆಲವು ತಿಂಗಳುಗಳ ಅವಧಿಯಲ್ಲಿ ಹೊಸ ಉದ್ಯೋಗವನ್ನು ಹುಡುಕಲು ಪರದಾಡುತ್ತಿದ್ದಾರೆ. ಈ ವಿದೇಶಿ ಕೆಲಸದ ವೀಸಾಗಳು ತಮ್ಮ ಉದ್ಯೋಗಗಳನ್ನು ಕಳೆದುಕೊಂಡ ನಂತರ ಮತ್ತು ಅವರ ವೀಸಾ ಸ್ಥಿತಿ ಬದಲಾಗುತ್ತದೆ.

ಇದನ್ನೂ ಓದಿ: 12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

ಅಮೆಜಾನ್ ಸಿಬ್ಬಂದಿ ಗೀತಾ (ಹೆಸರು ಬದಲಾಯಿಸಲಾಗಿದೆ) ಮೂರು ತಿಂಗಳ ಹಿಂದೆಯಷ್ಟೇ ಅಮೆರಿಕಕ್ಕೆ ಬಂದಿದ್ದರು. ಮಾರ್ಚ್ 20 ಆಕೆಯ ಕೆಲಸದ ಕೊನೆಯ ದಿನ ಎಂದು ಈ ವಾರ ಆಕೆಗೆ ಹೇಳಲಾಯಿತು. ಈಗ H-1B ವೀಸಾದಲ್ಲಿರುವ ಅವರ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ.  ಏಕೆಂದರೆ ಅವರು 60 ದಿನಗಳಲ್ಲಿ ಹೊಸ ಉದ್ಯೋಗವನ್ನು ಹುಡುಕಬೇಕಾಗಿದೆ, ಇಲ್ಲದಿದ್ದರೆ ಅವರು ಭಾರತಕ್ಕೆ ಹಿಂತಿರುಗುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ.

ಪ್ರಸ್ತುತ ಪರಿಸ್ಥಿತಿಗಳಲ್ಲಿ ಎಲ್ಲಾ ಐಟಿ ಕಂಪನಿಗಳು ಉದ್ಯೋಗ ಕಡಿತದಲ್ಲಿರುವಾಗ ಇಲ್ಲಿ ಉದ್ಯೋಗ ಪಡೆಯುವುದು ಅಸಾಧ್ಯವೆಂದು ಅವರು ಭಾವಿಸುತ್ತಾರೆ.

H-1B ವೀಸಾದಲ್ಲಿ ಮತ್ತೊಬ್ಬ IT ವೃತ್ತಿಪರರಾಗಿದ್ದ ಸೀತಾ (ಹೆಸರು ಬದಲಾಯಿಸಲಾಗಿದೆ), ಜನವರಿ 18 ರಂದು ಮೈಕ್ರೋಸಾಫ್ಟ್‌ನಲ್ಲಿ ಕೆಲಸ ಕಳೆದುಕೊಂಡಿದ್ದಾರೆ. ಆಕೆ ಒಂಟಿ ತಾಯಿಯಾಗಿದ್ದು, ಆಕೆಯ ಮಗ ಹೈಸ್ಕೂಲ್ ಜೂನಿಯರ್ ವರ್ಷದಲ್ಲಿದ್ದಾನೆ. ಕಾಲೇಜಿಗೆ ಸೇರಲು ತಯಾರಿ ನಡೆಸುತ್ತಿದ್ದಾನೆ. “ಈ ಪರಿಸ್ಥಿತಿಯು ನಮಗೆ ನಿಜವಾಗಿಯೂ ಕಷ್ಟಕರವಾಗಿದೆ” ಎಂದು ಅವರು ಹೇಳಿದರು.

“ಸಾವಿರಾರು ಟೆಕ್ ಉದ್ಯೋಗಿಗಳು ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವುದು ದುರದೃಷ್ಟಕರವಾಗಿದೆ, ವಿಶೇಷವಾಗಿ H-1B ವೀಸಾದಲ್ಲಿರುವವರು ಹೆಚ್ಚುವರಿ ಸವಾಲುಗಳನ್ನು ಎದುರಿಸುತ್ತಿದ್ದಾರೆ ಏಕೆಂದರೆ ಅವರು ಹೊಸ ಉದ್ಯೋಗವನ್ನು ಹುಡುಕಬೇಕು ಮತ್ತು 60 ದಿನಗಳೊಳಗೆ ತಮ್ಮ ವೀಸಾವನ್ನು ವರ್ಗಾಯಿಸಬೇಕು ಅಥವಾ ದೇಶವನ್ನು ತೊರೆಯುವ ಅಪಾಯವಿದೆ” ಎಂದು ಸಿಲಿಕಾನ್ ವ್ಯಾಲಿ -ಆಧಾರಿತ ಉದ್ಯಮಿ ಮತ್ತು ಸಮುದಾಯದ ಮುಖಂಡ ಅಜಯ್ ಜೈನ್ ಭುಟೋರಿಯಾ ಹೇಳಿದರು.

“ಇದು ಆಸ್ತಿಗಳ ಮಾರಾಟ ಮತ್ತು ಮಕ್ಕಳ ಶಿಕ್ಷಣಕ್ಕೆ ಅಡ್ಡಿಪಡಿಸುವುದು ಸೇರಿದಂತೆ ಕುಟುಂಬಗಳಿಗೆ ವಿನಾಶಕಾರಿ ಪರಿಣಾಮಗಳನ್ನು ಉಂಟುಮಾಡಬಹುದು. ಟೆಕ್ ಕಂಪನಿಗಳು H-1B ಉದ್ಯೋಗಿಗಳಿಗೆ ವಿಶೇಷ ಪರಿಗಣನೆಯಲ್ಲಿ ಕೆಲಸ ಮುಂದುವರೆಸಬೇಕು ಮತ್ತು ಅವರ ವೀಸಾ ಮುಕ್ತಾಯ ದಿನಾಂಕವನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ಏಕೆಂದರೆ ಉದ್ಯೋಗ ಮಾರುಕಟ್ಟೆ ಮತ್ತು ನೇಮಕಾತಿ ಪ್ರಕ್ರಿಯೆಯು ಸವಾಲಾಗಬಹುದು” ಎಂದು ಅವರು ಹೇಳಿದರು.

ಗ್ಲೋಬಲ್ ಇಂಡಿಯನ್ ಟೆಕ್ನಾಲಜಿ ಪ್ರೊಫೆಷನಲ್ಸ್ ಅಸೋಸಿಯೇಷನ್ ​​(GITPRO) ಮತ್ತು ಫೌಂಡೇಶನ್ ಫಾರ್ ಇಂಡಿಯಾ ಮತ್ತು ಇಂಡಿಯನ್ ಡಯಾಸ್ಪೊರಾ ಸ್ಟಡೀಸ್ (FIIDS) ಭಾನುವಾರ ಸಮುದಾಯ-ವ್ಯಾಪಿ ಪ್ರಯತ್ನವನ್ನು ಪ್ರಾರಂಭಿಸಿದೆ ಮತ್ತು ಉದ್ಯೋಗಾಕಾಂಕ್ಷಿಗಳನ್ನು ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಮಾಹಿತಿದಾರರಿಗೆ ಸಂಪರ್ಕಿಸುವ ಮೂಲಕ ಈ ಐಟಿ ವೃತ್ತಿಪರರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತದೆ.

“ಟೆಕ್ ಉದ್ಯಮದಲ್ಲಿ ಉದ್ಯೋಗ ಕಡಿತದಿಂದ, ಅಲ್ಲಿಯ ಉದ್ಯೋಗಿಗಳಿಗೆ ಜನವರಿ 2023 ಬಹಲ ಕ್ರೂರವಾಗಿದೆ. ಏಕೆಂದರೆ ಅನೇಕ ಪ್ರತಿಭಾವಂತರು ಕೆಲಸ ಕಳೆದುಕೊಂಡಿದ್ದಾರೆ. ಟೆಕ್ ಉದ್ಯಮವು ಭಾರತೀಯ ವಲಸಿಗರಿಂದ ಪ್ರಾಬಲ್ಯ ಹೊಂದಿರುವುದರಿಂದ, ಅವರು ಹೆಚ್ಚು ಪ್ರಭಾವ ಬೀರುತ್ತಾರೆ” ಎಂದು ಖಾಂಡೆ ರಾವ್ ಕಾಂಡ್ ಹೇಳಿದರು.

ಕೆಲಸ ಕಳೆದುಕೊಂಡ H-1B ಹೋಲ್ಡರ್‌ಗಳು 60 ದಿನಗಳಲ್ಲಿ H-1B ಪ್ರಾಯೋಜಕ ಕೆಲಸವನ್ನು ಹುಡುಕಬೇಕು ಅಥವಾ 10 ದಿನಗಳಲ್ಲಿ ಬಿಡಬೇಕು.

“ಇದು ಈ ತೆರಿಗೆ ಪಾವತಿ ಮತ್ತು ಕಾನೂನು ವಲಸಿಗರಿಗೆ ಕೊಡುಗೆ ನೀಡುವ ಕುಟುಂಬ ಜೀವನ ಮತ್ತು ಮಕ್ಕಳ ಶಿಕ್ಷಣ ಇತ್ಯಾದಿಗಳ ಮೇಲೆ ಭಾರಿ ಅಡ್ಡಿ ಉಂಟುಮಾಡುತ್ತದೆ” ಎಂದು ಎಫ್‌ಐಐಡಿಎಸ್‌ನಿಂದ ಖಂಡೇ ರಾವ್ ಕಾಂಡ್ ಹೇಳಿದ್ದಾರೆ.

ಕೆಲಸ ಕಳೆದುಕೊಂಡಿರುವ ಭಾರತೀಯ ಐಟಿ ಉದ್ಯೋಗಿಗಳು ತೀವ್ರ ಸಂಕಟದಲ್ಲಿದ್ದಾರೆ. ತಾವು ಎದುರಿಸುತ್ತಿರುವ ಭಯಾನಕ ಪರಿಸ್ಥಿತಿಗೆ ಪರಿಹಾರವನ್ನು ಕಂಡುಕೊಳ್ಳಲು ವಿವಿಧ ವಾಟ್ಸಾಪ್ ಗುಂಪುಗಳನ್ನು ರಚಿಸಿದ್ದಾರೆ. ವಾಟ್ಸಾಪ್ ಗುಂಪೊಂದರಲ್ಲಿ 800 ಕ್ಕೂ ಹೆಚ್ಚು ನಿರುದ್ಯೋಗಿ ಭಾರತೀಯ ಐಟಿ ಉದ್ಯೋಗಿಗಳು ಇದ್ದು, ಖಾಲಿ ಹುದ್ದೆಗಳ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ. ಮತ್ತೊಂದು ಗುಂಪಿನಲ್ಲಿ  ಸಲಹಾ ಸೇವೆಗಳನ್ನು ನೀಡಲು ಸ್ವಯಂಪ್ರೇರಿತರಾದ ಕೆಲವು ವಲಸೆ ವಕೀಲರೊಂದಿಗೆ ವಿವಿಧ ವೀಸಾ ಆಯ್ಕೆಗಳನ್ನು ಚರ್ಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...