Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...