Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...