Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....