Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...