Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿ ಹರಿಯುವ ನದಿಗಳನ್ನು ಬಯಲು ಸೀಮೆಯತ್ತ ತಿರುಗಿಸುವ ಅನಾಹುತಕಾರಿ ಕಾರ್ಯಸಾಧ್ಯವಲ್ಲದ ಯೋಜನೆಗಳು ಪ್ರಸ್ತಾಪವಾಗುತ್ತಿರುವ ಹೊತ್ತಲ್ಲೇ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಇದೇ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬರೋಬ್ಬರಿ ಒಂದು ಸಾವಿರದಾ ನಾಲ್ಕು ನೂರು ಕಿರು ಅಣೆಕಟ್ಟು ಕಟ್ಟಿ ನೀರಿನ ದಾಹ ಇಂಗಿಸಲಾಗುವುದೆಂದು ಹೇಳಿದ್ದಾರೆ! ಇಲ್ಲಿಯೇ ಸರಣಿ ಚೆಕ್ ಡ್ಯಾಮ್ ಕಟ್ಟಿದರೆ ಬಯಲು ಸೀಮೆ ನದಿಗಳಿಗೆ ಸೇರಿಸಲು ನೀರು ಸಿಗುತ್ತದಾ? ಇದೆಲ್ಲ ಒಂದಕ್ಕೊಂದು ವಿರೋಧಭಾಸದ ಹುಚ್ಚು ಲೆಕ್ಕಾಚಾರವೆಂಬ ಜಿಜ್ಞಾಸೆ ನಡೆದಿದೆ.

ಇಂಥ ಕೆಲಸಕ್ಕೆ ಬಾರದ ಯೋಜನೆಗಳ ಪ್ರಸ್ತಾಪವಾದಾಗೆಲ್ಲ ಪಶ್ಚಿಮವಾಹಿನಿ ನದಿಗಳು ವ್ಯರ್ಥವಾಗಿ ಸಮುದ್ರ ಸೇರುತ್ತದೆಂದು ಸರ್ಕಾರಿ ಪಂಡಿತರು ವ್ಯಾಖ್ಯಾನಿಸುತ್ತಾರೆ. ಆದರೆ ಪಶ್ಚಿಮವಾಹಿನಿ ನದಿಗಳು ಹರಿವಾಗ ಇಕ್ಕೆಲದ ದಂಡೆಯುದ್ದಕ್ಕೂ ಅಸಂಖ್ಯ ಜೀವ ರಾಶಿಯನ್ನು ಪೋರೆದು ಕೊನೆಗೆ ಕಡಲ ಜಲಚರಗಳಿಗೆ ಆಹಾರ-ಪೋಶಕಾಂಶ ಒದಗಿಸುತ್ತವೆ. ನದಿ ನೀರು ಸಮುದ್ರ ಸೇರದಿದ್ದರೆ ಅಳಿವೆ ಒಣಗಿ ಮೀನುಗಾರಿಕೆ, ಕೃಷಿ, ಕುಡಿಯುವ ನೀರಿನ ಬಾವಿಗಳಿಗೆ ಧಕ್ಕೆಯಾಗುತ್ತದೆ. ಹಾಗಾಗಿ ನದಿ ನೀರು ಸಮುದ್ರ ಸೇರುವುದು ವ್ಯರ್ಥವೆಂಬುದೇ ಅನರ್ಥಕಾರಿ ಮಾತೆಂದು ಪರಿಸರ ತಜ್ಞರು ಹೇಳುತ್ತಾರೆ. ಈಗ ಸಚಿವ ಮಾಧುಸ್ವಾಮಿಯೂ ಹಾಗೇ ಹೇಳಿದ್ದಾರೆ. ಪಶ್ಚಿಮ ಘಟ್ಟಗಳಲ್ಲಿನ ನದಿಗಳು ವ್ಯರ್ಥವಾಗಿ ನದಿ ಸೇರುತ್ತಿದ್ದು ಆ ನೀರನ್ನು ಕುಡಿಯುವುದಕ್ಕೆ 1,400 ಸರಣಿ ಚೆಕ್ ಡ್ಯಾಮ್‌ಗಳಲ್ಲಿ ಸಂಗ್ರಹಿಸಲಾಗುತ್ತದಂತೆ!

ಈ ಯೋಜನೆಗೆ ಪರಿಸರವಾದಿಗಳಿಂದ ದೊಡ್ಡ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಭುಗಿಲೆಳುತ್ತಿದ್ದಂತೆ ಸದರಿ ಯೋಜನೆ ಪರಿಸರಕ್ಕೆ ಮಾರಕವಲ್ಲವೆಂಬ ಸಮಜಾಯಿಶಿ ಕೊಟ್ಟಿದ್ದಾರೆ. ಪಶ್ಚಿಮ ಘಟ್ಟವಿರುವ ಐದು ಜಿಲ್ಲೆಗಳನ್ನು ಬಿಟ್ಟು ಉಳಿದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಈ ಕಿರು ಆಣೆಕಟ್ಟೆ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಲಾಗುತ್ತದಂತೆ. ಅಣೆಕಟ್ಟೆ ಎತ್ತರ ಆರು ಅಡಿಯಾದರೆ, ಅಚ್ಚುಕಟ್ಟು ಪ್ರದೇಶ 60-70 ಎಕರೆ. ದೊಡ್ಡ ಪ್ರಮಾಣದ ನೀರು ಸಂಗ್ರಹವಾಗುವುದಿಲ್ಲದ್ದರಿಂದ ಅರಣ್ಯ ನಾಶವಾಗುವುದಿಲ್ಲ, ಪರಿಸರ ಸಮಸ್ಯೆಯಿಲ್ಲ ಎಂದು ಮಂತ್ರಿ ಮಾಧುಸ್ವಾಮಿ ಹೇಳುತ್ತಾರೆ. ಇದನ್ನು ರಾಷ್ಟ್ರೀಯ ಜಲಮಿಷನ್ ಯೋಜನೆಯಲ್ಲಿ ಕಾರ್ಯಗತಗೊಳಿಸಲಾಗುತ್ತದಂತೆ. ಕೇಂದ್ರ ಸರ್ಕಾರ ನೆರವು ನೀಡುವ ಭರವಸೆಯಿದೆಯಂತೆ.

ಸಚಿವ ಮಾಧುಸ್ವಾಮಿ ಕೊಟ್ಟಿರುವ ಯೋಜನಾ ಮಾಹಿತಿ ಒಂಥರಾ ಮೋಗಮ್ ಆಗಿದೆ. ಯೋಜನೆಯ ಅಂದಾಜು ವೆಚ್ಚ, ಸಂಗ್ರಹವಾಗುವ ನೀರು ಎಲ್ಲಿ ಬಳಸಲಾಗುತ್ತದೆ, ಆ ನೀರನ್ನು ಯಾವ ವಿಧಾನದಲ್ಲಿ ಉದ್ದೇಶಿತ ಪ್ರದೇಶಕ್ಕೆ ಸಾಗಿಸಲಾಗುತ್ತದೆ ಎಂಬುದನ್ನು ಮಾಧುಸ್ವಾಮಿ ಹೇಳಿಲ್ಲ; ವಿಸ್ತ್ರತ ಯೋಜನಾ [ಡಿಪಿಆರ್] ಬಗ್ಗೆ ಕಾರ್ಯಸಾಧ್ಯತಾ ವರದಿ ಯೋಜನೆ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ಏನನ್ನು ಸ್ಪಷ್ಟಪಡಿಸಿಲ್ಲ. ಯೋಜನೆ ಜಾರಿಗೊಳಿಸಲು ಮಂತ್ರಿಗಳು ವಹಿಸಿರುವ ಆಸಕ್ತಿ ನೋಡಿದರೆ ಅವರಿಗೆ ಪಶ್ಚಿಮ ಘಟ್ಟಗಳು ಅದೆಷ್ಟು ನಾಜೂಕು ಮತ್ತಲ್ಲಿ ಅಭಿವೃದ್ಧಿ ಕಾಮಗಾರಿ ಕೈಗಳ್ಳುವಾಗ ಅದೆಂಥ ಎಚ್ಚರ ವಹಿಸಬೇಕೆಂದು ಬಾಹ್ಯಕಾಶ ವಿಜ್ಞಾನಿ ಕಸ್ತೂರಿರಂಗನ್, ಪರಿಸರ ವಿಜ್ಞಾನಿ ಮಾಧವ ಗಾಡ್ಗಿಳ್ ಮತ್ತಿತರ ಭೂ ವಿಜ್ಞಾನಿಗಳು ಅಧ್ಯಯನಪೂರ್ಣವಾಗಿ ಮಂಡಿಸಿರುವ ವರದಿಯ ಗಂಭೀರತೆಯ ಅರಿವಿರುವಂತಿಲ್ಲವೆಂದು ಪರಿಸರವಾದಿಗಳು ಹೇಳುತ್ತಾರೆ. ಅಣೆಕಟ್ಟು ಯಾವ ಗಾತ್ರದ್ದೇ ಇರಲಿ. ಘಟ್ಟದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದರೆ ಘಟ್ಟದ ಬುಡ ಅಲ್ಲಾಡಿ ಗುಡ್ಡಗಳು ಕುಸಿದು ಅನಾಹುತವಾಗುತ್ತದೆ. ಘಟ್ಟದ ಮೇಲೆ ಯಾವ ಕಾಮಗಾರಿ ಕೈಗೊಂಡರೂ ಪರಿಸರದ ಲಯ ತಪ್ಪುತ್ತದೆ. ಪಶ್ಚಿಮ ಘಟ್ಟದಲ್ಲಿ ಕಿರು ಆಣೆಕಟ್ಟು ಕಟ್ಟಿದರೆ ಘಟ್ಟದ ಬುಡದಲ್ಲಿನ ಬದುಕಷ್ಟೇ ಅಲ್ಲ, ಇಡೀ ರಾಜ್ಯದ ಮೇಲೆ ಕೆಟ್ಟ ಪರಿಣಮವಾಗುತ್ತದೆ ಎಂದು ಭೂ ವಿಜ್ಞಾನಿಗಳು ಹೇಳುತ್ತಾರೆ.

ಕೊಡಗಿನದು ಮೆದು ಮಣ್ಣಾದ್ದರಿಂದ ತೇವಾಂಶ ಹೆಚ್ಚಾದರೆ ಗುಡ್ಡಗಳು ಕುಸಿಯುತ್ತವೆ. 2018ರಲ್ಲಿ ಹಾರಂಗಿ ಜಲಾಶಯದ ಹಿನ್ನಿರಿಂದ ಗುಡ್ಡಗಳು ಆಸ್ಪೋಟಿಸಿದ್ದವು. ಗುಡ್ಡದಲ್ಲಿ ಮಿನಿ ಜಲಾಶಯ ಕಟ್ಟುವುದು ಅಪಾಯಕಾರಿ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. ಕಾಫಿ ತೋಟಕ್ಕೆ ನೀರು ಹಾಯಿಸಲು ಕಾಫಿ ಬೆಳೆಗಾರರು ಹಲವು ಕೆರೆಗಳನ್ನು ನಿರ್ಮಿಸಿದ್ದರು. 2018ರಲ್ಲಿ ಮಳೆ ಜೋರಾಗಿ ಕೆರೆಗಳು ಒಡೆದು ಬೆಟ್ಟಗಳು ಕಸಿದುಬಿದ್ದು ದೊಡ್ಡ ದುರಂತ ಸಂಭವಿಸಿತ್ತು. ಬೆಟ್ಟದ ಮೇಲೆ ಕೆರೆ ನಿರ್ಮಿಸಿದ್ದೆ ಅನಾಹುತಕ್ಕೆ ಕಾರಣವೆಂದು ಭೂ ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ಇದೆಲ್ಲ ಸರಣಿ ಮಿನಿ ಜಲಾಶಯ ಕಟ್ಟಲು ಹೊರಟವರ ಕಣ್ಣು ತೆರೆಸದಿರುವುದು ದುರಂತವಾಗಿದೆ.

PC : Bantwal News

ಕಳೆದ ವರ್ಷ ತಲಕಾವೇರಿಯಲ್ಲಿ ಗುಡ್ಡ ಸ್ಪೋಟಗೊಂಡು ಗಂಡಾಂತರ ಎದುರಾಗಿತ್ತು; ಈ ಮಳೆಗಾಲದಲ್ಲಿ ಅಣಸಿ ಗುಡ್ಡ, ಅರೆಬೈಲ್ ಗುಡ್ಡ ಉರುಳಿಬಿದ್ದಿದೆ! ಯಲ್ಲಾಪುರದ ಕಳಚೆಯೆಂಬ ಹಳ್ಳಿ ಮಣ್ಣಡಿ ಹೂತು ಹೋಗಿದೆ. ಈಗ ಪಶ್ಚಿಮ ಘಟ್ಟ ಭಗದಲ್ಲಿಕರು ಜಲ ವಿದ್ಯುತ್ ಯೋಜನೆಗಳಿಂದ ಅನೇಕ ಸಮಸ್ಯೆಯಾಗುತ್ತಿದೆ. ಮಿನಿ ಡ್ಯಾಮ್ ನಿರ್ಮಾಣವಾಗುವ ಪ್ರದೇಶದ ಗುಡ್ಡಗಳಿಂದ ನೀರು ಒಸರುತ್ತದೆ. ಇದು ಭೂ ಕುಸಿತಕ್ಕೆ ಕಾರಣವಾಗಲಿದೆ. ಚೆಕ್ ಡ್ಯಾಮ್ ನಿರ್ಮಾಣಕ್ಕೆ ತಳಪಾಯ ಬಂಡೆಯಂತೆ ಗಟ್ಟಿಯಾಗಿರಬೇಕು. ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಂತಹ ಗಟ್ಟಿ ಜಾಗವಿಲ್ಲ. ಮಿನಿ ಅಣೆಕಟ್ಟು ಕಟ್ಟಿದರೂ ಅವು ದೀರ್ಘ ಕಾಲ ಬಾಳಿಕೆ ಬರಲಾರದು. ಮಳೆ ನೀರಿನೊಂದಿಗೆ ಹರಿದುಬರುವ ಕಸ-ಕಡ್ಡಿ ಮಿನಿ ಡ್ಯಾಮ್‌ನಲ್ಲಿ ತುಂಬಿ ಕೊಚ್ಚಿಹೋಗುವ ಸಾಧ್ಯತೆಯೆ ಹೆಚ್ಚೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಇದೆಲ್ಲ ಕಿರು ಡಾಮ್‌ನಿಂದ ಕುಡಿಯುವ ನೀರಿನ ದಾಹ ತಣಿಸುವ ತರಾತುರಿಯಲ್ಲಿರುವ ಪಂಡಿತರಿಗೆ ಅರ್ಥ ಮಾಡಿಸುವವರ್‍ಯಾರು?!


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...