Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಬೃಹತ್ 'ಬೆಂಗಳೂರು ಚಲೋ': ಸಾವಿರಾರು ಮಹಿಳೆಯರು ಭಾಗಿ

ಮದ್ಯ ನಿಷೇಧ ಆಂದೋಲನದಿಂದ ಬೃಹತ್ ‘ಬೆಂಗಳೂರು ಚಲೋ’: ಸಾವಿರಾರು ಮಹಿಳೆಯರು ಭಾಗಿ

- Advertisement -
- Advertisement -

ಮದ್ಯ ನಿಷೇಧ ಆಂದೋಲನ ಕರ್ನಾಟಕ ವತಿಯಿಂದ ‘ಮಹಿಳೆಯರ ಸ್ವಾಭಿಮಾನಕ್ಕಾಗಿ ಬೆಂಗಳೂರು ಚಲೋ’ ಸಮಾವೇಶ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ನವೆಂಬರ್ 25) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾನೂನು ರೀತಿಯಲ್ಲಿ ಹಾಗೂ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಕಳೆದ 20 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿಸುತ್ತಲೆ ಬರಲಾಗುತ್ತಿದೆ. ಸರ್ಕಾರ ಬರೀ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಕಡಗೆ ಹೆಚ್ಚಿನ ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳೂ ಕುಡಿಯುವ ಚಟಕ್ಕೆ ಬಲಿಯಾಗುತ್ತಿದ್ದಾರೆ. ಜೊತೆಗೆ ಮಹಿಳೆಯರು ಅವರ ಕುಟುಂಬಗಳನ್ನು ನಡೆಸುವುದಕ್ಕೆ ಹಲವಾರು ಕಷ್ಟ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪಂಜಾಬ್ ರಾಜ್ಯದಂತೆ ನಮ್ಮ ರಾಜ್ಯವು ಮದ್ಯ ಸೇವನೆಯಿಂದ ಮಾದಕ ವ್ಯಸನದತ್ತ (ಡ್ರಗ್ಸ್‌) ಯುವಕರು ಹೋಗುವಂತೆ ಮಾಡಬಹುದು ಎಂದು ಸಮಾವೇಶದಲ್ಲಿ ಪಾಲ್ಗೊಂಡವರು ಕಳವಳ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕರ್ನಾಟಕದ ಹಲವು ಗ್ರಾಮಗಳಿಂದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ದೂರುಗಳನ್ನುಅಬಕಾರಿ ಇಲಾಖೆ, ಗ್ರಾಮ ಪಂಚಾಯತಿಗಳು, ಪೋಲಿಸ್ ಠಾಣೆಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ, ಯಾವ ದೂರುಗಳ ಮೇಲೂ ಕ್ರಮ ಜರುಗಿಸಿಲ್ಲ ಎಂದರು.

ಸಮಾವೇಶದಲ್ಲಿ ಸರ್ಕಾರಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ, ಅವುಗಳು ಹೀಗಿವೆ..

1. ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್) ಹೊಂದಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರ್ಕಾರ ಅದನ್ನು ತೆಗೆದು ಹಾಕಿತು.

2. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್‌ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ, ನಮ್ಮ ಬೇಡಿಕೆ ಇಷ್ಟೇ ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್ ರಾಜ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...