Homeಅಂತರಾಷ್ಟ್ರೀಯ"Strike For Black Lives": 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

“Strike For Black Lives”: 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ವರ್ಣಭೇದ ನೀತಿಯ ವಿರುದ್ಧ ಪ್ರಪಂಚದಾದ್ಯಂತ ನಡೆಯುತ್ತಿರುವ Black Lives Matter ಆಂದೋಲನದ ಪರ ಐಕ್ಯಮತ್ಯ ಸಾರಲು ಸೋಮವಾರ ಅಮೆರಿಕಾ ದೇಶಾದ್ಯಂತ ಸಾವಿರಾರು ಅಮೇರಿಕನ್ ಕಾರ್ಮಿಕರು ತಮ್ಮ ಉದ್ಯೋಗ ತ್ಯಜಿಸಿ ಮುಷ್ಕರ ನಡೆಸಿದ್ದಾರೆ.

“Strike For Black Lives” ಹೆಸರಿನಲ್ಲಿ ನಡೆಸಿದ ಮುಷ್ಕರದಲ್ಲಿ ಹಲವಾರು ಶ್ರೇಣಿಯ ಕೈಗಾರಿಕೆಗಳ ಉದ್ಯೋಗಿಗಳು “ವ್ಯವಸ್ಥಿತ ವರ್ಣಭೇದ ನೀತಿಯನ್ನು ಕೊನೆಗೊಳಿಸಬೇಕೆಂದು” ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಮುಷ್ಕರದಲ್ಲಿ ಅಮೆರಿಕದ 200 ಕ್ಕೂ ಹೆಚ್ಚು ನಗರಗಳಲ್ಲಿನ ಸಾವಿರಾರು ಜನರು ಭಾಗವಹಿಸಿದ್ದಾರೆ ಎಂದು ಅಮೇರಿಕನ್ ಮಾಧ್ಯಮಗಳು ವರದಿ ಮಾಡಿದೆ.

ಸುಮಾರು 1,500 ಭದ್ರತಾ ಸಿಬ್ಬಂದಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ, ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ಕನೆಕ್ಟಿಕಟ್‌ನ 85 ವಿವಿಧ ನರ್ಸಿಂಗ್ ಹೋಂಗಳಿಂದ ಸುಮಾರು 6,000 ದಾದಿಯರು ಮುಷ್ಕರ ನಡೆಸಿದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ನ್ಯೂಯಾರ್ಕ್‌ನಲ್ಲಿ, ಸುಮಾರು 100 ಜನರು ಟ್ರಂಪ್ ಇಂಟರ್ ನ್ಯಾಷನಲ್ ಹೋಟೆಲ್ ಹೊರಗೆ ಮೆರವಣಿಗೆ ನಡೆಸಿದರು. ಹೀರೋಸ್ ಕಾಯ್ದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ಇದು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಹೆಣಗಾಡುತ್ತಿರುವ ಮನೆಗಳಿಗೆ ಆರ್ಥಿಕ ನೆರವು ನೀಡುವ ಶಾಸನವಾಗಿದೆ.

ಈ ಮಸೂದೆಯನ್ನು ಮೇ ತಿಂಗಳಲ್ಲಿ ಡೆಮೋಕ್ರಾಟ್ ಬಹುಮತದ ಪ್ರತಿನಿಧಿ ಸಭೆ ಅಂಗೀಕರಿಸಿತು. ಆದರೆ ರಿಪಬ್ಲಿಕನ್ನರು ನಿಯಂತ್ರಣದಲ್ಲಿರುವ ಸಂಸತ್ತು ಇದನ್ನು ನಿರ್ಬಂಧಿಸಿತು.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

“ನಾವು ಆರ್ಥಿಕತೆಯನ್ನು ಮುಂದುವರೆಸಿದ್ದೇವೆ. ಪ್ರತಿಯೊಬ್ಬರನ್ನು ಸುರಕ್ಷಿತವಾಗಿರಿಸಿದ್ದೇವೆ. ಅದಕ್ಕಾಗಿ ನಾವು ಗೌರವಿಸಲ್ಪಡಬೇಕು ಮತ್ತು ನಮಗೆ ಪರಿಹಾರವನ್ನು ನೀಡಬೇಕು” ಎಂದು 42 ವರ್ಷದ ಭದ್ರತಾ ಸಿಬ್ಬಂದಿಯಾದ ಜೋರ್ಡಾನ್ ವೈಸ್ ಹೇಳಿದ್ದಾರೆ.

ಬೋಸ್ಟನ್, ಲಾಸ್ ಏಂಜಲೀಸ್ ಮತ್ತು ಚಿಕಾಗೊ ಸೇರಿದಂತೆ 24ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ಸೇವಾ ನೌಕರರ ಅಂತರರಾಷ್ಟ್ರೀಯ ಒಕ್ಕೂಟ ತಿಳಿಸಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...