Homeಅಂತರಾಷ್ಟ್ರೀಯ"Strike For Black Lives": 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

“Strike For Black Lives”: 200ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಕಾರ್ಮಿಕರ ಕೂಗು!

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ವರ್ಣಭೇದ ನೀತಿಯ ವಿರುದ್ಧ ಪ್ರಪಂಚದಾದ್ಯಂತ ನಡೆಯುತ್ತಿರುವ Black Lives Matter ಆಂದೋಲನದ ಪರ ಐಕ್ಯಮತ್ಯ ಸಾರಲು ಸೋಮವಾರ ಅಮೆರಿಕಾ ದೇಶಾದ್ಯಂತ ಸಾವಿರಾರು ಅಮೇರಿಕನ್ ಕಾರ್ಮಿಕರು ತಮ್ಮ ಉದ್ಯೋಗ ತ್ಯಜಿಸಿ ಮುಷ್ಕರ ನಡೆಸಿದ್ದಾರೆ.

“Strike For Black Lives” ಹೆಸರಿನಲ್ಲಿ ನಡೆಸಿದ ಮುಷ್ಕರದಲ್ಲಿ ಹಲವಾರು ಶ್ರೇಣಿಯ ಕೈಗಾರಿಕೆಗಳ ಉದ್ಯೋಗಿಗಳು “ವ್ಯವಸ್ಥಿತ ವರ್ಣಭೇದ ನೀತಿಯನ್ನು ಕೊನೆಗೊಳಿಸಬೇಕೆಂದು” ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಮುಷ್ಕರದಲ್ಲಿ ಅಮೆರಿಕದ 200 ಕ್ಕೂ ಹೆಚ್ಚು ನಗರಗಳಲ್ಲಿನ ಸಾವಿರಾರು ಜನರು ಭಾಗವಹಿಸಿದ್ದಾರೆ ಎಂದು ಅಮೇರಿಕನ್ ಮಾಧ್ಯಮಗಳು ವರದಿ ಮಾಡಿದೆ.

ಸುಮಾರು 1,500 ಭದ್ರತಾ ಸಿಬ್ಬಂದಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ, ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ಕನೆಕ್ಟಿಕಟ್‌ನ 85 ವಿವಿಧ ನರ್ಸಿಂಗ್ ಹೋಂಗಳಿಂದ ಸುಮಾರು 6,000 ದಾದಿಯರು ಮುಷ್ಕರ ನಡೆಸಿದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ನ್ಯೂಯಾರ್ಕ್‌ನಲ್ಲಿ, ಸುಮಾರು 100 ಜನರು ಟ್ರಂಪ್ ಇಂಟರ್ ನ್ಯಾಷನಲ್ ಹೋಟೆಲ್ ಹೊರಗೆ ಮೆರವಣಿಗೆ ನಡೆಸಿದರು. ಹೀರೋಸ್ ಕಾಯ್ದೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಿದರು. ಇದು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಹೆಣಗಾಡುತ್ತಿರುವ ಮನೆಗಳಿಗೆ ಆರ್ಥಿಕ ನೆರವು ನೀಡುವ ಶಾಸನವಾಗಿದೆ.

ಈ ಮಸೂದೆಯನ್ನು ಮೇ ತಿಂಗಳಲ್ಲಿ ಡೆಮೋಕ್ರಾಟ್ ಬಹುಮತದ ಪ್ರತಿನಿಧಿ ಸಭೆ ಅಂಗೀಕರಿಸಿತು. ಆದರೆ ರಿಪಬ್ಲಿಕನ್ನರು ನಿಯಂತ್ರಣದಲ್ಲಿರುವ ಸಂಸತ್ತು ಇದನ್ನು ನಿರ್ಬಂಧಿಸಿತು.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ನ್ಯೂಯಾರ್ಕ್ ನಗರದ 22,000 ಕ್ಕೂ ಹೆಚ್ಚು ಜನ ಆಫ್ರಿಕನ್ ಅಮೆರಿಕನ್ನರು ಮತ್ತು ಹಿಸ್ಪಾನಿಕ್ಸ್ ನಿವಾಸಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

“ನಾವು ಆರ್ಥಿಕತೆಯನ್ನು ಮುಂದುವರೆಸಿದ್ದೇವೆ. ಪ್ರತಿಯೊಬ್ಬರನ್ನು ಸುರಕ್ಷಿತವಾಗಿರಿಸಿದ್ದೇವೆ. ಅದಕ್ಕಾಗಿ ನಾವು ಗೌರವಿಸಲ್ಪಡಬೇಕು ಮತ್ತು ನಮಗೆ ಪರಿಹಾರವನ್ನು ನೀಡಬೇಕು” ಎಂದು 42 ವರ್ಷದ ಭದ್ರತಾ ಸಿಬ್ಬಂದಿಯಾದ ಜೋರ್ಡಾನ್ ವೈಸ್ ಹೇಳಿದ್ದಾರೆ.

ಬೋಸ್ಟನ್, ಲಾಸ್ ಏಂಜಲೀಸ್ ಮತ್ತು ಚಿಕಾಗೊ ಸೇರಿದಂತೆ 24ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ಸೇವಾ ನೌಕರರ ಅಂತರರಾಷ್ಟ್ರೀಯ ಒಕ್ಕೂಟ ತಿಳಿಸಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...