Homeಮುಖಪುಟ'ಅಲ್-ಅರೇಬಿಯಾ' ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

‘ಅಲ್-ಅರೇಬಿಯಾ’ ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

- Advertisement -
- Advertisement -

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್‌ ನಗರದಲ್ಲಿ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬದ 20 ಮಂದಿ ಮೃತಪಟ್ಟಿದ್ದು, ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದೆ.

ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬಸ್ಥರು ಆಶ್ರಯ ಪಡೆದಿದ್ದ ಮನೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದೆ. ತನ್ನ ಸಹೋದರ, ಅತ್ತಿಗೆ, ಸೊಸೆಯಂದಿರು ಮತ್ತು ಸೋದರಳಿಯರು ಸೇರಿ 20 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವದ್ ಅಲ್-ಅರೇಬಿಯಾಗೆ ತಿಳಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಇಸ್ರೇಲ್‌ ವೈಮಾನಿಕ ದಾಳಿಯನ್ನು ನಡೆಸಿದ್ದು, ಅವರಿಗೆ ಮನೆಯಿಂದ ಓಡಿಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಅವಾದ್ ಅವರ ಮೂವರು ಸಂಬಂಧಿಕರು ಈ ಹಿಂದೆ ಗಾಝಾ ಪಟ್ಟಿಯಲ್ಲಿ ನುಸೈರಾತ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7 ರಂದು ಗಾಝಾದ ಮೇಲೆ ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಕನಿಷ್ಠ 22,700 ಪ್ಯಾಲೆಸ್ತೀನಿಯನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಈ ಪ್ರದೇಶದ 2.3 ಮಿಲಿಯನ್ ಜನಸಂಖ್ಯೆಯಲ್ಲಿ 85 ಪ್ರತಿಶತಕ್ಕಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಮೃತರಲ್ಲಿ 70 ಪ್ರತಿಶತ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಗಾಝಾದಲ್ಲಿ ಪ್ರತಿದಿನ ಕೊಲ್ಲಲ್ಪಡುವ ಮಕ್ಕಳ ಸಂಖ್ಯೆ ‘100 ಕ್ಕಿಂತ ಹೆಚ್ಚು’ ಎಂದು ವೈದ್ಯರು ಶಾಕಿಂಗ್‌ ಅಂಕಿ-ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್‌ ಸೇನೆಯು ಗಾಝಾಪಟ್ಟಿಯಲ್ಲಿ 125 ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ.  318 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖೆದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಝಾ ನಗರ ಮತ್ತು ಉತ್ತರದ ಮೂರು ಪ್ರಮುಖ ಆಸ್ಪತ್ರೆಗಳ ನಿರ್ದೇಶಕರು ಸೇರಿದಂತೆ 99 ಆರೋಗ್ಯ ಕಾರ್ಯಕರ್ತರನ್ನು ಇಸ್ರೇಲ್‌ ಪಡೆಗಳು ಬಂಧಿಸಿವೆ.  ದಕ್ಷಿಣ ಗಝಾ ನಗರವಾದ ಖಾನ್ ಯೂನಿಸ್‌ನಲ್ಲಿ ನಾಸರ್ ಮೆಡಿಕಲ್ ಕಾಂಪ್ಲೆಕ್ಸ್ ಮತ್ತು ಅಲ್-ಅಮಲ್ ಆಸ್ಪತ್ರೆಯ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಿದೆ. ಆಸ್ಪತ್ರೆಗಳನ್ನು ರಕ್ಷಿಸಲು ಅಂತರಾಷ್ಟ್ರೀಯ ಸಂಸ್ಥೆಗಳು ತುರ್ತು ಕ್ರಮ ತೆಗೆದುಕೊಳ್ಳುವಂತೆ ಕರೆ ನೀಡಿವೆ.

ನೆತನ್ಯಾಹು ವಿರುದ್ಧ ಇಸ್ರೇಲ್‌ನಲ್ಲಿ ಪ್ರತಿಭಟನೆ

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ವಿರುದ್ದ ಇಸ್ರೇಲ್‌ನಲ್ಲಿ ವ್ಯಾಪಕವಾದ ಪ್ರತಿಭಟನೆ ಮುಂದುವರಿದಿದೆ.  ಹಮಾಸ್‌ ಒತ್ತೆಯಾಳುಗಳಾಗಿರಿಸಿರುವ ಇಸ್ರೇಲ್‌ ನಾಗರಿಕರನ್ನು ವಾಪಾಸ್ಸು ಕರೆತರಬೇಕು, ಪ್ರಧಾನಿ ನೆತನ್ಯಾಹು  ರಾಜೀನಾಮೆ ನೀಡಬೇಕು, ಗಾಝಾ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅ.7ರಂದು ಹಮಾಸ್ ವಶಕ್ಕೆ ಪಡೆದುಕೊಂಡ ಇಸ್ರೇಲ್‌ ಒತ್ತೆಯಾಳುಗಳ ಬೆಂಬಲಿಗರು, ಸ್ನೇಹಿತರು ಮತ್ತು ಕುಟುಂಬಗಳು ಶನಿವಾರ ಟೆಲ್ ಅವಿವ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಯುದ್ಧ ಘೋಷಣೆ ಬಳಿಕ ಈ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ಆದರೆ ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯ ಇಸ್ರೇಲ್‌ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರತಿಭಟನಕಾರರು ಬುಷಾ ಬುಷಾ, ಬುಷಾ, ಅಂದರೆ ಅವಮಾನ, ಅವಮಾನ ಎಂದು ಸರ್ಕಾರವನ್ನು ಉಲ್ಲೇಖಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೆಲವರು ಅ.7ರ ಘಟನೆಗಳಿಗೆ ನೆತನ್ಯಾಹು ಮತ್ತು ಅವರ ಸರಕಾರದ ಇತರ ಅಧಿಕಾರಿಗಳನ್ನು ದೂಷಿಸಿದ್ದಾರೆ.

ಇದನ್ನು ಓದಿ: ‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...