Homeಮುಖಪುಟ'ಅಲ್-ಅರೇಬಿಯಾ' ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

‘ಅಲ್-ಅರೇಬಿಯಾ’ ವರದಿಗಾರನ ಕುಟುಂಬದ 20 ಸದಸ್ಯರನ್ನು ಹತ್ಯೆ ಮಾಡಿದ ಇಸ್ರೇಲ್‌

- Advertisement -
- Advertisement -

ಗಾಝಾದ ದಕ್ಷಿಣ ನಗರವಾದ ಖಾನ್ ಯೂನಿಸ್‌ ನಗರದಲ್ಲಿ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬದ 20 ಮಂದಿ ಮೃತಪಟ್ಟಿದ್ದು, ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದೆ.

ಅಲ್-ಅರೇಬಿಯಾದ ವರದಿಗಾರ ಮೊಹಮ್ಮದ್ ಅವದ್ ಅವರ ಕುಟುಂಬಸ್ಥರು ಆಶ್ರಯ ಪಡೆದಿದ್ದ ಮನೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದೆ. ತನ್ನ ಸಹೋದರ, ಅತ್ತಿಗೆ, ಸೊಸೆಯಂದಿರು ಮತ್ತು ಸೋದರಳಿಯರು ಸೇರಿ 20 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವದ್ ಅಲ್-ಅರೇಬಿಯಾಗೆ ತಿಳಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಇಸ್ರೇಲ್‌ ವೈಮಾನಿಕ ದಾಳಿಯನ್ನು ನಡೆಸಿದ್ದು, ಅವರಿಗೆ ಮನೆಯಿಂದ ಓಡಿಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಅವಾದ್ ಅವರ ಮೂವರು ಸಂಬಂಧಿಕರು ಈ ಹಿಂದೆ ಗಾಝಾ ಪಟ್ಟಿಯಲ್ಲಿ ನುಸೈರಾತ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 7 ರಂದು ಗಾಝಾದ ಮೇಲೆ ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಕನಿಷ್ಠ 22,700 ಪ್ಯಾಲೆಸ್ತೀನಿಯನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಈ ಪ್ರದೇಶದ 2.3 ಮಿಲಿಯನ್ ಜನಸಂಖ್ಯೆಯಲ್ಲಿ 85 ಪ್ರತಿಶತಕ್ಕಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಮೃತರಲ್ಲಿ 70 ಪ್ರತಿಶತ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಗಾಝಾದಲ್ಲಿ ಪ್ರತಿದಿನ ಕೊಲ್ಲಲ್ಪಡುವ ಮಕ್ಕಳ ಸಂಖ್ಯೆ ‘100 ಕ್ಕಿಂತ ಹೆಚ್ಚು’ ಎಂದು ವೈದ್ಯರು ಶಾಕಿಂಗ್‌ ಅಂಕಿ-ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್‌ ಸೇನೆಯು ಗಾಝಾಪಟ್ಟಿಯಲ್ಲಿ 125 ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡಿದೆ.  318 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖೆದ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಾಝಾ ನಗರ ಮತ್ತು ಉತ್ತರದ ಮೂರು ಪ್ರಮುಖ ಆಸ್ಪತ್ರೆಗಳ ನಿರ್ದೇಶಕರು ಸೇರಿದಂತೆ 99 ಆರೋಗ್ಯ ಕಾರ್ಯಕರ್ತರನ್ನು ಇಸ್ರೇಲ್‌ ಪಡೆಗಳು ಬಂಧಿಸಿವೆ.  ದಕ್ಷಿಣ ಗಝಾ ನಗರವಾದ ಖಾನ್ ಯೂನಿಸ್‌ನಲ್ಲಿ ನಾಸರ್ ಮೆಡಿಕಲ್ ಕಾಂಪ್ಲೆಕ್ಸ್ ಮತ್ತು ಅಲ್-ಅಮಲ್ ಆಸ್ಪತ್ರೆಯ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಿದೆ. ಆಸ್ಪತ್ರೆಗಳನ್ನು ರಕ್ಷಿಸಲು ಅಂತರಾಷ್ಟ್ರೀಯ ಸಂಸ್ಥೆಗಳು ತುರ್ತು ಕ್ರಮ ತೆಗೆದುಕೊಳ್ಳುವಂತೆ ಕರೆ ನೀಡಿವೆ.

ನೆತನ್ಯಾಹು ವಿರುದ್ಧ ಇಸ್ರೇಲ್‌ನಲ್ಲಿ ಪ್ರತಿಭಟನೆ

ಗಾಝಾ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ವಿರುದ್ದ ಇಸ್ರೇಲ್‌ನಲ್ಲಿ ವ್ಯಾಪಕವಾದ ಪ್ರತಿಭಟನೆ ಮುಂದುವರಿದಿದೆ.  ಹಮಾಸ್‌ ಒತ್ತೆಯಾಳುಗಳಾಗಿರಿಸಿರುವ ಇಸ್ರೇಲ್‌ ನಾಗರಿಕರನ್ನು ವಾಪಾಸ್ಸು ಕರೆತರಬೇಕು, ಪ್ರಧಾನಿ ನೆತನ್ಯಾಹು  ರಾಜೀನಾಮೆ ನೀಡಬೇಕು, ಗಾಝಾ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅ.7ರಂದು ಹಮಾಸ್ ವಶಕ್ಕೆ ಪಡೆದುಕೊಂಡ ಇಸ್ರೇಲ್‌ ಒತ್ತೆಯಾಳುಗಳ ಬೆಂಬಲಿಗರು, ಸ್ನೇಹಿತರು ಮತ್ತು ಕುಟುಂಬಗಳು ಶನಿವಾರ ಟೆಲ್ ಅವಿವ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಯುದ್ಧ ಘೋಷಣೆ ಬಳಿಕ ಈ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ಆದರೆ ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಸಂಖ್ಯೆಯ ಇಸ್ರೇಲ್‌ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರತಿಭಟನಕಾರರು ಬುಷಾ ಬುಷಾ, ಬುಷಾ, ಅಂದರೆ ಅವಮಾನ, ಅವಮಾನ ಎಂದು ಸರ್ಕಾರವನ್ನು ಉಲ್ಲೇಖಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೆಲವರು ಅ.7ರ ಘಟನೆಗಳಿಗೆ ನೆತನ್ಯಾಹು ಮತ್ತು ಅವರ ಸರಕಾರದ ಇತರ ಅಧಿಕಾರಿಗಳನ್ನು ದೂಷಿಸಿದ್ದಾರೆ.

ಇದನ್ನು ಓದಿ: ‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...