Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...