Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...