Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....