Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...