Homeಮುಖಪುಟಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ

- Advertisement -
- Advertisement -

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರದ ಬಳಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದು ದೇಶಾದ್ಯಂತ ಆಘಾತವನ್ನುಂಟು ಮಾಡಿದೆ. ಆದರೆ ದೇವಾಲಯದ ಕಟ್ಟಾ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ್ ಸರಸ್ವತಿ ತಮ್ಮ ಅನುಯಾಯಿ ಮಾಡಿದ ಕೃತ್ಯವನ್ನು ಹೊಗಳಿದ್ದಾರೆ. ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಆರೋಪಿ ಶೃಂಗಿ ನಂದನ್ ಯಾದವ್‌ನನ್ನು ಶ್ಲಾಘಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ನಡೆದ ಕ್ರೂರ ಹಲ್ಲೆಗೆ ಪ್ರತಿಕ್ರಿಯಿಸಿರುವ ಯತಿ ನರಸಿಂಗಾನಂದ್ ಸರಸ್ವತಿ, ಹಲ್ಲೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಯಾಯಿಗಳು ತಾನು ನೀಡಿದ ತರಬೇತಿಯನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿಯು ಸರಸ್ವತಿ ಮುಸ್ಲಿಮರ ವಿರುದ್ಧ ಹಿಂದೂ ಸಮುದಾಯದವರಲ್ಲಿ ಪದೇ ಪದೇ ಜನಾಂಗೀಯ ದ್ವೇಷ ಬಿತ್ತಿದ್ದರು, ಇದರಿಂದಾಗಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಆರೋಪಿ ಶೃಂಗಿ ನಂದನ್ ಯಾದವ್ ಬಾಲಕನನ್ನು ಥಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋದಲ್ಲಿ ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದು.

ಆರೋಪಿ ಶೃಂಗಿ ನಂದನ್ ಯಾದವ್ ಸರಸ್ವತಿಯ ಅನುಯಾಯಿಯಾಗಿದ್ದು, ಬಾಲಕನ ಮೇಲೆ ಹಲ್ಲೆ ನಡೆಸಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಬಲಪಂಥೀಯ ಗುಂಪುಗಳು ಹೊಗಳಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸರಸ್ವತಿ, “ಒಂದು ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಅತಿಕ್ರಮಣದಾರರಿಗೆ ಸೂಕ್ತ ಉತ್ತರವನ್ನು ನೀಡಲು ನಾನು ನನ್ನ ಅನುಯಾಯಿಗಳಿಗೆ ಉತ್ತಮ ತರಬೇತಿ ನೀಡಿದ್ದೇನೆ.  ಶುಕ್ರವಾರ (ಮಾರ್ಚ್ 12) ಅವರು ನನ್ನ ಸೂಚನೆಗಳನ್ನು ಅನುಸರಿಸಿಯೇ ಮಾಡಿದ್ದಾರೆ’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೆಖಿಸಿದೆ.

“ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ” ಎಂದಿದ್ದಾರೆ.

ಪ್ರಕರಣದಲ್ಲಿ ಶೃಂಗಿ ನಂದನ್ ಯಾದವ್ ಮತ್ತು ಸರಸ್ವತಿಯ ಇನ್ನೊಬ್ಬ ಅನುಯಾಯಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನ್ನ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಬಾಲಕನ ತಲೆ, ತೋಳು ಮತ್ತು ತೊಡೆಗೆ ಎಕ್ಸರೆ ಮಾಡಲಾಗಿದ್ದು, ಇಡೀ ರಾತ್ರಿ ನೋವಿನಿಂದ ನರಳುತ್ತಾನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...