Homeಮುಖಪುಟಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ

- Advertisement -
- Advertisement -

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರದ ಬಳಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದು ದೇಶಾದ್ಯಂತ ಆಘಾತವನ್ನುಂಟು ಮಾಡಿದೆ. ಆದರೆ ದೇವಾಲಯದ ಕಟ್ಟಾ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ್ ಸರಸ್ವತಿ ತಮ್ಮ ಅನುಯಾಯಿ ಮಾಡಿದ ಕೃತ್ಯವನ್ನು ಹೊಗಳಿದ್ದಾರೆ. ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಆರೋಪಿ ಶೃಂಗಿ ನಂದನ್ ಯಾದವ್‌ನನ್ನು ಶ್ಲಾಘಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ನಡೆದ ಕ್ರೂರ ಹಲ್ಲೆಗೆ ಪ್ರತಿಕ್ರಿಯಿಸಿರುವ ಯತಿ ನರಸಿಂಗಾನಂದ್ ಸರಸ್ವತಿ, ಹಲ್ಲೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಯಾಯಿಗಳು ತಾನು ನೀಡಿದ ತರಬೇತಿಯನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿಯು ಸರಸ್ವತಿ ಮುಸ್ಲಿಮರ ವಿರುದ್ಧ ಹಿಂದೂ ಸಮುದಾಯದವರಲ್ಲಿ ಪದೇ ಪದೇ ಜನಾಂಗೀಯ ದ್ವೇಷ ಬಿತ್ತಿದ್ದರು, ಇದರಿಂದಾಗಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಆರೋಪಿ ಶೃಂಗಿ ನಂದನ್ ಯಾದವ್ ಬಾಲಕನನ್ನು ಥಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋದಲ್ಲಿ ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದು.

ಆರೋಪಿ ಶೃಂಗಿ ನಂದನ್ ಯಾದವ್ ಸರಸ್ವತಿಯ ಅನುಯಾಯಿಯಾಗಿದ್ದು, ಬಾಲಕನ ಮೇಲೆ ಹಲ್ಲೆ ನಡೆಸಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಬಲಪಂಥೀಯ ಗುಂಪುಗಳು ಹೊಗಳಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸರಸ್ವತಿ, “ಒಂದು ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಅತಿಕ್ರಮಣದಾರರಿಗೆ ಸೂಕ್ತ ಉತ್ತರವನ್ನು ನೀಡಲು ನಾನು ನನ್ನ ಅನುಯಾಯಿಗಳಿಗೆ ಉತ್ತಮ ತರಬೇತಿ ನೀಡಿದ್ದೇನೆ.  ಶುಕ್ರವಾರ (ಮಾರ್ಚ್ 12) ಅವರು ನನ್ನ ಸೂಚನೆಗಳನ್ನು ಅನುಸರಿಸಿಯೇ ಮಾಡಿದ್ದಾರೆ’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೆಖಿಸಿದೆ.

“ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ” ಎಂದಿದ್ದಾರೆ.

ಪ್ರಕರಣದಲ್ಲಿ ಶೃಂಗಿ ನಂದನ್ ಯಾದವ್ ಮತ್ತು ಸರಸ್ವತಿಯ ಇನ್ನೊಬ್ಬ ಅನುಯಾಯಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನ್ನ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಬಾಲಕನ ತಲೆ, ತೋಳು ಮತ್ತು ತೊಡೆಗೆ ಎಕ್ಸರೆ ಮಾಡಲಾಗಿದ್ದು, ಇಡೀ ರಾತ್ರಿ ನೋವಿನಿಂದ ನರಳುತ್ತಾನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...