Homeಮುಖಪುಟಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ

- Advertisement -
- Advertisement -

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರದ ಬಳಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದು ದೇಶಾದ್ಯಂತ ಆಘಾತವನ್ನುಂಟು ಮಾಡಿದೆ. ಆದರೆ ದೇವಾಲಯದ ಕಟ್ಟಾ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ್ ಸರಸ್ವತಿ ತಮ್ಮ ಅನುಯಾಯಿ ಮಾಡಿದ ಕೃತ್ಯವನ್ನು ಹೊಗಳಿದ್ದಾರೆ. ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಆರೋಪಿ ಶೃಂಗಿ ನಂದನ್ ಯಾದವ್‌ನನ್ನು ಶ್ಲಾಘಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ನಡೆದ ಕ್ರೂರ ಹಲ್ಲೆಗೆ ಪ್ರತಿಕ್ರಿಯಿಸಿರುವ ಯತಿ ನರಸಿಂಗಾನಂದ್ ಸರಸ್ವತಿ, ಹಲ್ಲೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಯಾಯಿಗಳು ತಾನು ನೀಡಿದ ತರಬೇತಿಯನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿಯು ಸರಸ್ವತಿ ಮುಸ್ಲಿಮರ ವಿರುದ್ಧ ಹಿಂದೂ ಸಮುದಾಯದವರಲ್ಲಿ ಪದೇ ಪದೇ ಜನಾಂಗೀಯ ದ್ವೇಷ ಬಿತ್ತಿದ್ದರು, ಇದರಿಂದಾಗಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಆರೋಪಿ ಶೃಂಗಿ ನಂದನ್ ಯಾದವ್ ಬಾಲಕನನ್ನು ಥಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋದಲ್ಲಿ ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದು.

ಆರೋಪಿ ಶೃಂಗಿ ನಂದನ್ ಯಾದವ್ ಸರಸ್ವತಿಯ ಅನುಯಾಯಿಯಾಗಿದ್ದು, ಬಾಲಕನ ಮೇಲೆ ಹಲ್ಲೆ ನಡೆಸಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಬಲಪಂಥೀಯ ಗುಂಪುಗಳು ಹೊಗಳಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸರಸ್ವತಿ, “ಒಂದು ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಅತಿಕ್ರಮಣದಾರರಿಗೆ ಸೂಕ್ತ ಉತ್ತರವನ್ನು ನೀಡಲು ನಾನು ನನ್ನ ಅನುಯಾಯಿಗಳಿಗೆ ಉತ್ತಮ ತರಬೇತಿ ನೀಡಿದ್ದೇನೆ.  ಶುಕ್ರವಾರ (ಮಾರ್ಚ್ 12) ಅವರು ನನ್ನ ಸೂಚನೆಗಳನ್ನು ಅನುಸರಿಸಿಯೇ ಮಾಡಿದ್ದಾರೆ’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೆಖಿಸಿದೆ.

“ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ” ಎಂದಿದ್ದಾರೆ.

ಪ್ರಕರಣದಲ್ಲಿ ಶೃಂಗಿ ನಂದನ್ ಯಾದವ್ ಮತ್ತು ಸರಸ್ವತಿಯ ಇನ್ನೊಬ್ಬ ಅನುಯಾಯಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನ್ನ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಬಾಲಕನ ತಲೆ, ತೋಳು ಮತ್ತು ತೊಡೆಗೆ ಎಕ್ಸರೆ ಮಾಡಲಾಗಿದ್ದು, ಇಡೀ ರಾತ್ರಿ ನೋವಿನಿಂದ ನರಳುತ್ತಾನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...