Homeಮುಖಪುಟಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ

- Advertisement -
- Advertisement -

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರದ ಬಳಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದು ದೇಶಾದ್ಯಂತ ಆಘಾತವನ್ನುಂಟು ಮಾಡಿದೆ. ಆದರೆ ದೇವಾಲಯದ ಕಟ್ಟಾ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ್ ಸರಸ್ವತಿ ತಮ್ಮ ಅನುಯಾಯಿ ಮಾಡಿದ ಕೃತ್ಯವನ್ನು ಹೊಗಳಿದ್ದಾರೆ. ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಆರೋಪಿ ಶೃಂಗಿ ನಂದನ್ ಯಾದವ್‌ನನ್ನು ಶ್ಲಾಘಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ನಡೆದ ಕ್ರೂರ ಹಲ್ಲೆಗೆ ಪ್ರತಿಕ್ರಿಯಿಸಿರುವ ಯತಿ ನರಸಿಂಗಾನಂದ್ ಸರಸ್ವತಿ, ಹಲ್ಲೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಯಾಯಿಗಳು ತಾನು ನೀಡಿದ ತರಬೇತಿಯನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿಯು ಸರಸ್ವತಿ ಮುಸ್ಲಿಮರ ವಿರುದ್ಧ ಹಿಂದೂ ಸಮುದಾಯದವರಲ್ಲಿ ಪದೇ ಪದೇ ಜನಾಂಗೀಯ ದ್ವೇಷ ಬಿತ್ತಿದ್ದರು, ಇದರಿಂದಾಗಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಆರೋಪಿ ಶೃಂಗಿ ನಂದನ್ ಯಾದವ್ ಬಾಲಕನನ್ನು ಥಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋದಲ್ಲಿ ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದು.

ಆರೋಪಿ ಶೃಂಗಿ ನಂದನ್ ಯಾದವ್ ಸರಸ್ವತಿಯ ಅನುಯಾಯಿಯಾಗಿದ್ದು, ಬಾಲಕನ ಮೇಲೆ ಹಲ್ಲೆ ನಡೆಸಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಬಲಪಂಥೀಯ ಗುಂಪುಗಳು ಹೊಗಳಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸರಸ್ವತಿ, “ಒಂದು ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಅತಿಕ್ರಮಣದಾರರಿಗೆ ಸೂಕ್ತ ಉತ್ತರವನ್ನು ನೀಡಲು ನಾನು ನನ್ನ ಅನುಯಾಯಿಗಳಿಗೆ ಉತ್ತಮ ತರಬೇತಿ ನೀಡಿದ್ದೇನೆ.  ಶುಕ್ರವಾರ (ಮಾರ್ಚ್ 12) ಅವರು ನನ್ನ ಸೂಚನೆಗಳನ್ನು ಅನುಸರಿಸಿಯೇ ಮಾಡಿದ್ದಾರೆ’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೆಖಿಸಿದೆ.

“ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ” ಎಂದಿದ್ದಾರೆ.

ಪ್ರಕರಣದಲ್ಲಿ ಶೃಂಗಿ ನಂದನ್ ಯಾದವ್ ಮತ್ತು ಸರಸ್ವತಿಯ ಇನ್ನೊಬ್ಬ ಅನುಯಾಯಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನ್ನ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಬಾಲಕನ ತಲೆ, ತೋಳು ಮತ್ತು ತೊಡೆಗೆ ಎಕ್ಸರೆ ಮಾಡಲಾಗಿದ್ದು, ಇಡೀ ರಾತ್ರಿ ನೋವಿನಿಂದ ನರಳುತ್ತಾನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...