Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...