Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...