Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....