Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...