Homeಮುಖಪುಟಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

ಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರು ಲೋಕಸಭೆಯ ಮೊಗಸಾಲೆಯಲ್ಲಿ ಜೈಲಿಗಟ್ಟುವುದಾಗಿ ಎಚ್ಚರಿಕೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಆರೋಪಿಸಿದ್ದಾರೆ.

ಪೋನ್ ಕರೆಗಳ ಮೂಲಕ ಮತ್ತು ಶಿವಸೇನೆಯ ಲೆಟರ್‌ಹೆಡ್‌ಗಳಲ್ಲಿ ಆಸಿಡ್-ಅಟ್ಯಾಕ್ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಸಂಸದ, ಯಾರಾದರೂ ಮಹಿಳಾ ಸಂಸದರಿಗೆ ಬೆದರಿಕೆ ಹಾಕಿದ್ದರೇ, ದೈಹಿಕ ಹಾನಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದರೇ ನಾನು ಮಹಿಳಾ ಸದಸ್ಯರೊಂದಿಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 22 ರಂದು ಸ್ಪೀಕರ್‌ಗೆ ಬರೆದಿರುವ ಪತ್ರವೊಂದರಲ್ಲಿ ನವನೀತ್ ಕೌರ್‌ ರಾಣಾ ಅವರು, “ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ಅರವಿಂದ ಸಾವಂತ್ ವಿರುದ್ಧ ನಾನು ಕಠಿಣ ಕ್ರಮಗಳನ್ನು ಬಯಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿನ ಅವ್ಯವಹಾರಗಳ ವಿಷಯವನ್ನು ಪ್ರಸ್ತಾಪಿಸಿದಕ್ಕೆ, ಸಚಿನ್ ವಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದಕ್ಕೆ ಅರವಿಂದ್ ಸಾವಂತ್ ಕೋಪಗೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನೀವು ಮಹಾರಾಷ್ಟ್ರದಲ್ಲಿ ಹೇಗೆ ತಿರುಗಾಡುತ್ತೀರಿ ಎಂದು ನಾನು ನೋಡುತ್ತೇನೆ” ಮತ್ತು “ನಾವು ನಿಮ್ಮನ್ನು ಜೈಲಿಗಟ್ಟುತ್ತೇವೆ” ಎಂದು ಹೇಳಿದ್ದಾರೆ ಎಂದಿದ್ದಾರೆ. ಈ ಘಟನೆಗೆ ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ನವನೀತ್ ಕೌರ್‌ ರಾಣಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಸಾವಂತ್, ಅವರ ಆರೋಪಗಳು “ಸಂಪೂರ್ಣ ಸುಳ್ಳು” ಎಂದಿದ್ದಾರೆ. ಸಂಸತ್ತಿನಲ್ಲಿ ನವನೀತ್ ಕೌರ್‌ ರಾಣಾ ಅಗೌರವ ಮತ್ತು ಅಸಭ್ಯತೆಯಿಂದ ಮಾತನಾಡುತ್ತಾರೆ. ಎಲ್ಲರಿಗೂ ಬೆದರಿಕೆ ಹಾಕುವವರು ಅವರೇ ಎಂದು ಆರೋಪಿಸಿದ್ದಾರೆ.

“ನಾನು ನನ್ನ ಜೀವನದಲ್ಲಿ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹದರಲ್ಲಿ ಮಹಿಳೆಗೆ ಬೆದರಿಕೆ ಹಾಕುವ ಪ್ರಶ್ನೆಯಿಲ್ಲ” ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. “ಸದನವು ಹೊರಗಿನಿಂದ ಯಾರನ್ನಾದರೂ ಹೆಸರಿಸುವುದನ್ನು ನಿಷೇಧಿಸುತ್ತದೆ. ಆದರೆ ಅವರು ಅದನ್ನು ಮಾಡುತ್ತಿದ್ದಾರೆ. ಅದೆಲ್ಲಾ ದಾಖಲೆಯಲ್ಲಿ ಇರುತ್ತದೆ. ಕೆಲವರು ವಿಷಯಗಳನ್ನು ತಿರುಚಲು ಮತ್ತು ಪ್ರಚಾರವನ್ನು ಪಡೆಯಲು ಪರಿಣತರಾಗಿದ್ದಾರೆ” ಎಂದಿದ್ದಾರೆ.

ಆಸಿಡ್-ಅಟ್ಯಾಕ್ ಬೆದರಿಕೆಗಳನ್ನು ಉಲ್ಲೇಖಿಸಿದ ಅರವಿಂದ್ ಸಾವಂತ್ “ಅಂತಹ ಕೃತ್ಯಗಳನ್ನು ಯಾರು ಮಾಡಿದರೂ ನಾನು ಖಂಡಿಸುತ್ತೇನೆ. ಯಾರಾದರೂ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, ನಾನು ನವನೀತ್ ಕೌರ್‌ ರಾಣಾ ಅವರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...