Homeಮುಖಪುಟಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

ಶಿವಸೇನಾ ಸಂಸದನಿಂದ ಬೆದರಿಕೆ, ಆಸಿಡ್ ದಾಳಿ ಎಚ್ಚರಿಕೆ: ಸಂಸದೆ ನವನೀತ್ ಕೌರ್ ರಾಣಾ ಆರೋಪ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸದನದಲ್ಲಿ ಮಾತನಾಡಿದ್ದಕ್ಕಾಗಿ, ಶಿವಸೇನೆಯ ಸಂಸದ ಅರವಿಂದ ಸಾವಂತ್ ಅವರು ಲೋಕಸಭೆಯ ಮೊಗಸಾಲೆಯಲ್ಲಿ ಜೈಲಿಗಟ್ಟುವುದಾಗಿ ಎಚ್ಚರಿಕೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಆರೋಪಿಸಿದ್ದಾರೆ.

ಪೋನ್ ಕರೆಗಳ ಮೂಲಕ ಮತ್ತು ಶಿವಸೇನೆಯ ಲೆಟರ್‌ಹೆಡ್‌ಗಳಲ್ಲಿ ಆಸಿಡ್-ಅಟ್ಯಾಕ್ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಪ್ರಧಾನಿ ಮತ್ತು ಗೃಹಸಚಿವರಿಗೆ ಪತ್ರ ಬರೆದಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಸಂಸದ, ಯಾರಾದರೂ ಮಹಿಳಾ ಸಂಸದರಿಗೆ ಬೆದರಿಕೆ ಹಾಕಿದ್ದರೇ, ದೈಹಿಕ ಹಾನಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದರೇ ನಾನು ಮಹಿಳಾ ಸದಸ್ಯರೊಂದಿಗೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಮಾರ್ಚ್ 22 ರಂದು ಸ್ಪೀಕರ್‌ಗೆ ಬರೆದಿರುವ ಪತ್ರವೊಂದರಲ್ಲಿ ನವನೀತ್ ಕೌರ್‌ ರಾಣಾ ಅವರು, “ಇಂದು ಶಿವಸೇನೆ ಸಂಸದ ಅರವಿಂದ ಸಾವಂತ್ ನನಗೆ ಬೆದರಿಕೆ ಹಾಕಿದ ರೀತಿ ನನಗೆ ಮಾತ್ರವಲ್ಲ, ದೇಶದ ಎಲ್ಲ ಮಹಿಳೆಯರಿಗೂ ಮಾಡಿದ ಅವಮಾನವಾಗಿದೆ. ಆದ್ದರಿಂದ ಅರವಿಂದ ಸಾವಂತ್ ವಿರುದ್ಧ ನಾನು ಕಠಿಣ ಕ್ರಮಗಳನ್ನು ಬಯಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿನ ಅವ್ಯವಹಾರಗಳ ವಿಷಯವನ್ನು ಪ್ರಸ್ತಾಪಿಸಿದಕ್ಕೆ, ಸಚಿನ್ ವಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದಕ್ಕೆ ಅರವಿಂದ್ ಸಾವಂತ್ ಕೋಪಗೊಂಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. “ನೀವು ಮಹಾರಾಷ್ಟ್ರದಲ್ಲಿ ಹೇಗೆ ತಿರುಗಾಡುತ್ತೀರಿ ಎಂದು ನಾನು ನೋಡುತ್ತೇನೆ” ಮತ್ತು “ನಾವು ನಿಮ್ಮನ್ನು ಜೈಲಿಗಟ್ಟುತ್ತೇವೆ” ಎಂದು ಹೇಳಿದ್ದಾರೆ ಎಂದಿದ್ದಾರೆ. ಈ ಘಟನೆಗೆ ರಾಜಮುಂದ್ರ ಸಂಸದ ಭಾರತ್ ಮಾರ್ಗನಿ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ನವನೀತ್ ಕೌರ್‌ ರಾಣಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಸಾವಂತ್, ಅವರ ಆರೋಪಗಳು “ಸಂಪೂರ್ಣ ಸುಳ್ಳು” ಎಂದಿದ್ದಾರೆ. ಸಂಸತ್ತಿನಲ್ಲಿ ನವನೀತ್ ಕೌರ್‌ ರಾಣಾ ಅಗೌರವ ಮತ್ತು ಅಸಭ್ಯತೆಯಿಂದ ಮಾತನಾಡುತ್ತಾರೆ. ಎಲ್ಲರಿಗೂ ಬೆದರಿಕೆ ಹಾಕುವವರು ಅವರೇ ಎಂದು ಆರೋಪಿಸಿದ್ದಾರೆ.

“ನಾನು ನನ್ನ ಜೀವನದಲ್ಲಿ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹದರಲ್ಲಿ ಮಹಿಳೆಗೆ ಬೆದರಿಕೆ ಹಾಕುವ ಪ್ರಶ್ನೆಯಿಲ್ಲ” ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. “ಸದನವು ಹೊರಗಿನಿಂದ ಯಾರನ್ನಾದರೂ ಹೆಸರಿಸುವುದನ್ನು ನಿಷೇಧಿಸುತ್ತದೆ. ಆದರೆ ಅವರು ಅದನ್ನು ಮಾಡುತ್ತಿದ್ದಾರೆ. ಅದೆಲ್ಲಾ ದಾಖಲೆಯಲ್ಲಿ ಇರುತ್ತದೆ. ಕೆಲವರು ವಿಷಯಗಳನ್ನು ತಿರುಚಲು ಮತ್ತು ಪ್ರಚಾರವನ್ನು ಪಡೆಯಲು ಪರಿಣತರಾಗಿದ್ದಾರೆ” ಎಂದಿದ್ದಾರೆ.

ಆಸಿಡ್-ಅಟ್ಯಾಕ್ ಬೆದರಿಕೆಗಳನ್ನು ಉಲ್ಲೇಖಿಸಿದ ಅರವಿಂದ್ ಸಾವಂತ್ “ಅಂತಹ ಕೃತ್ಯಗಳನ್ನು ಯಾರು ಮಾಡಿದರೂ ನಾನು ಖಂಡಿಸುತ್ತೇನೆ. ಯಾರಾದರೂ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, ನಾನು ನವನೀತ್ ಕೌರ್‌ ರಾಣಾ ಅವರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...