Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...