Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...