Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...