Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...