Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....