Homeಮುಖಪುಟವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ ಸದಸ್ಯರ ದೂರಿನ ಆಧಾರದ ಮೇಲೆ ಓಡಿಸ್ಸಾದ ಕಟಕ್ ಗ್ರಾಮದ 42 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರ ತಂಡ ಬಂಧಿಸಿ ವಿಚಾರಣೆಗೆ ತೆಗೆದುಕೊಂಡಿದೆ. ಈ ವ್ಯಕ್ತಿಯ ದೂರವಾಣಿ ಸಂಖ್ಯೆಯಿಂದ ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ದೂರು ನೀಡಲಾಗಿತ್ತು.

ಭುವನೇಶ್ವರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಕಟಕ್‌ನ ಸಲೆಪರ್ ಬಳಿಯ ಕುಸಂಬಿ ಗ್ರಾಮದ ನಿವಾಸಿ ಸಯೀದ್ ಹಸನ್ ಅಹ್ಮದ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507, 153 ಎ, 124 ಎ ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವುಗಳಲ್ಲಿ, ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

PC: The Wire

ಜುಲೈ 10 ರಂದು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸಿಂಘವಾಲಿ ಅಹಿರ್ ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಕುಲದೀಪ್ ಪಾಂಚಾಲ್ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ, ಪೊಲೀಸರಿಂದ ಭದ್ರತೆ  ಕೋರಿದ್ದರು. ಈಗ ಇದೇ ದೂರವಾಣಿ ಸಂಖ್ಯೆ ಅಹ್ಮದ್‌ಗೆ ಸೇರಿದ್ದು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ  ಕರೆದೊಯ್ಯಲಾಗಿದೆ.

ಸಲೆಪುರ್ ಮಾರುಕಟ್ಟೆಯಲ್ಲಿ ಟಾರ್ಚ್ ಮತ್ತು ಪ್ಲಾಸ್ಟಿಕ್ ವಸ್ತುಗಳ ಸಣ್ಣ ಅಂಗಡಿಯನ್ನು ಹೊಂದಿರುವ ಅಹ್ಮದ್, ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ “ಅವಹೇಳನಕಾರಿ ಹೇಳಿಕೆಗಳನ್ನು” ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಯುಪಿಯ ಬಾಗ್‌ಪತ್ ಜಿಲ್ಲೆಯ ಇಬ್ಬರು ಪೊಲೀಸರ ತಂಡ ಓಡಿಸ್ಸಾದ ಸ್ಥಳೀಯ ಪೊಲೀಸರ ಸಹಾಯದಿಂದ ಅಹ್ಮದ್‌ನನ್ನು ಬಂಧಿಸಿ, ತದನಂತರ ಆತನನ್ನು ವಿಚಾರಣೆಗೆ ಕೋರಿ ಕಟಕ್‌ನಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಮುಂದೆ ಹಾಜರುಪಡಿಸಿತು. ಸಿಜೆಎಂ ಆರೋಪಿಯನ್ನು ಸಲೆಪುರ್‌ನ ಜೆಎಂಎಫ್‌ಸಿ ಮುಂದೆ ಹಾಜರುಪಡಿಸಲು ಹೇಳಿತ್ತು. ಜೆಎಂಎಫ್‌ಸಿ ನ್ಯಾಯಾಲಯ ಯುಪಿ ಪೊಲೀಸರಿಗೆ ಅಹ್ಮದ್‌ಗೆ ನಾಲ್ಕು ದಿನಗಳ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಯುಪಿ ಪೊಲೀಸರ ಹೆಚ್ಚಿನ ತನಿಖೆಯ ನಂತರ ಅಹ್ಮದ್ ವಿರುದ್ಧ ಐಪಿಸಿಯ 153 ಎ, 124 ಎ ಮತ್ತು 504 ಸೆಕ್ಷನ್ ಅಡಿಯಲ್ಲಿ ಆರೋಪಗಳನ್ನು ಸೇರಿಸಲಾಗಿದೆ ಎಂದು ಸಲೆಪುರ್ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಝಾರ್ನಾ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ಆದರೆ ಅಹ್ಮದ್ ಅವರ ತಂದೆ, ನಿವೃತ್ತ ಶಾಲಾ ಶಿಕ್ಷಕ ಸೈಯದ್ ರಹೀದ್ ಅಹ್ಮದ್, ಪಂಚಲ್ ಅವರ ದೂರಿನಲ್ಲಿ ಉಲ್ಲೇಖಿಸಿರುವ ಮೊಬೈಲ್ ಸಂಖ್ಯೆ ಅವರ ಮಗನಿಗೆ ಸೇರಿದೆ, ಆದರೆ ತನ್ನ ಮಗ ನಿರಪರಾಧಿ ಎಂದು ಹೇಳಿದ್ದಾರೆ. ಅವರು ಯಾರಿಗೂ ಬೆದರಿಕೆ ಹಾಕಿಲ್ಲ. ನಮ್ಮ ಪ್ರದೇಶದಲ್ಲಿ ನನ್ನ ಮಗನ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಬಾಗ್‌ಪತ್ ಮತ್ತು ಸಲೆಪುರ್ ಪರಸ್ಪರ ಎಷ್ಟು ದೂರವಿದೆ ಎಂದು ಯೋಚಿಸಿ ಎಂದಿದ್ದಾರೆ.

ಇನ್ನು ಆಶ್ಚರ್ಯಕರ ಸಂಗತಿಯೆಂದರೆ, ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ಗಮನಹರಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಕಟಕ್ ಪೊಲೀಸ್ ಅಧೀಕ್ಷಕ (ಗ್ರಾಮೀಣ), ಬಿ. ಜುಗಲ್ ಕಿಶೋರ್ ಅವರು ಅಹ್ಮದ್ ವಿರುದ್ಧದ ಪ್ರಕರಣದ ವಿವರಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೊಡ್ಡ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ. ಅವರ ಮುಸ್ಲಿಂ ಕುಟುಂಬವು ಈ ಪ್ರದೇಶದಲ್ಲಿ ಹೆಸರಾಂತ ಕುಟುಂಬವಾಗಿದೆ. ಅಹ್ಮದ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲ ಎಂದು ಸಲೇಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಿಹಾರ್ ಮಲ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಸಾಮಾಜಿಕ ಕಾರ್ಯಕರ್ತ ಬಿಡ್ಯುತ್ ಮೊಹಂತಿ ಅವರು ಅಹ್ಮದ್ ಅವರ ಬಂಧನವನ್ನು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣ ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ 2015 ರಲ್ಲಿ ದೆಹಲಿ ಮತ್ತು ಒಡಿಶಾ ಪೊಲೀಸರ ಜಂಟಿ ತಂಡವು 37 ವರ್ಷದ ಮುಸ್ಲಿಂ ಪಾದ್ರಿಯನ್ನು ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಬಂಧಿಸಿತ್ತು ಎಂಬುದು ಹಲವರಿಗೆ ನೆನಪಿದೆ. ಅರೇಬಿಕ್ ಮತ್ತು ಇಸ್ಲಾಮಿಕ್ ಅಧ್ಯಯನದಲ್ಲಿ ಪಿಎಚ್‌ಡಿ ಪದವಿ ಪಡೆದ ಮೌಲಾನಾ ಅಬ್ದುಲ್ ರೆಹಮಾನ್ ಅವರನ್ನು ಕಟಕ್‌ನ ಜಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಸ್ಚಿಮಾ ಕಚ್ಚಾ ಗ್ರಾಮದಿಂದ ಬಂಧಿಸಲಾಗಿತ್ತು.

ಈಗ ಸಯೀದ್ ಹಸನ್ ಅಹ್ಮದ್ ಬಂಧನ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳೀಯ ಪೊಲೀಸರ ಪ್ರಕಾರ ಆತನ ವಿರುದ್ಧ ಈವರೆಗೂ ಯಾವುದೇ ಪ್ರಕರಣಗಳಿಲ್ಲ. ನನ್ನ ಮಗ ನಿರಪರಾಧಿ ಎಂದು ತಂದೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಉತ್ತರ ಪ್ರದೇಶ ಪೊಲೀಸರು ಮಾತ್ರ ಸೆಕ್ಷನ್ 507 ಹಾಕಿದ್ದಾರೆ. ನಂತರ ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣವನ್ನು ಅಹ್ಮದ್ ಮೇಲೆ ಹಾಕಿದ್ದಾರೆ.


ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...