Homeಮುಖಪುಟವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ ಸದಸ್ಯರ ದೂರಿನ ಆಧಾರದ ಮೇಲೆ ಓಡಿಸ್ಸಾದ ಕಟಕ್ ಗ್ರಾಮದ 42 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರ ತಂಡ ಬಂಧಿಸಿ ವಿಚಾರಣೆಗೆ ತೆಗೆದುಕೊಂಡಿದೆ. ಈ ವ್ಯಕ್ತಿಯ ದೂರವಾಣಿ ಸಂಖ್ಯೆಯಿಂದ ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ದೂರು ನೀಡಲಾಗಿತ್ತು.

ಭುವನೇಶ್ವರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಕಟಕ್‌ನ ಸಲೆಪರ್ ಬಳಿಯ ಕುಸಂಬಿ ಗ್ರಾಮದ ನಿವಾಸಿ ಸಯೀದ್ ಹಸನ್ ಅಹ್ಮದ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507, 153 ಎ, 124 ಎ ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವುಗಳಲ್ಲಿ, ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

PC: The Wire

ಜುಲೈ 10 ರಂದು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸಿಂಘವಾಲಿ ಅಹಿರ್ ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಕುಲದೀಪ್ ಪಾಂಚಾಲ್ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ, ಪೊಲೀಸರಿಂದ ಭದ್ರತೆ  ಕೋರಿದ್ದರು. ಈಗ ಇದೇ ದೂರವಾಣಿ ಸಂಖ್ಯೆ ಅಹ್ಮದ್‌ಗೆ ಸೇರಿದ್ದು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ  ಕರೆದೊಯ್ಯಲಾಗಿದೆ.

ಸಲೆಪುರ್ ಮಾರುಕಟ್ಟೆಯಲ್ಲಿ ಟಾರ್ಚ್ ಮತ್ತು ಪ್ಲಾಸ್ಟಿಕ್ ವಸ್ತುಗಳ ಸಣ್ಣ ಅಂಗಡಿಯನ್ನು ಹೊಂದಿರುವ ಅಹ್ಮದ್, ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ “ಅವಹೇಳನಕಾರಿ ಹೇಳಿಕೆಗಳನ್ನು” ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಯುಪಿಯ ಬಾಗ್‌ಪತ್ ಜಿಲ್ಲೆಯ ಇಬ್ಬರು ಪೊಲೀಸರ ತಂಡ ಓಡಿಸ್ಸಾದ ಸ್ಥಳೀಯ ಪೊಲೀಸರ ಸಹಾಯದಿಂದ ಅಹ್ಮದ್‌ನನ್ನು ಬಂಧಿಸಿ, ತದನಂತರ ಆತನನ್ನು ವಿಚಾರಣೆಗೆ ಕೋರಿ ಕಟಕ್‌ನಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಮುಂದೆ ಹಾಜರುಪಡಿಸಿತು. ಸಿಜೆಎಂ ಆರೋಪಿಯನ್ನು ಸಲೆಪುರ್‌ನ ಜೆಎಂಎಫ್‌ಸಿ ಮುಂದೆ ಹಾಜರುಪಡಿಸಲು ಹೇಳಿತ್ತು. ಜೆಎಂಎಫ್‌ಸಿ ನ್ಯಾಯಾಲಯ ಯುಪಿ ಪೊಲೀಸರಿಗೆ ಅಹ್ಮದ್‌ಗೆ ನಾಲ್ಕು ದಿನಗಳ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಯುಪಿ ಪೊಲೀಸರ ಹೆಚ್ಚಿನ ತನಿಖೆಯ ನಂತರ ಅಹ್ಮದ್ ವಿರುದ್ಧ ಐಪಿಸಿಯ 153 ಎ, 124 ಎ ಮತ್ತು 504 ಸೆಕ್ಷನ್ ಅಡಿಯಲ್ಲಿ ಆರೋಪಗಳನ್ನು ಸೇರಿಸಲಾಗಿದೆ ಎಂದು ಸಲೆಪುರ್ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಝಾರ್ನಾ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ಆದರೆ ಅಹ್ಮದ್ ಅವರ ತಂದೆ, ನಿವೃತ್ತ ಶಾಲಾ ಶಿಕ್ಷಕ ಸೈಯದ್ ರಹೀದ್ ಅಹ್ಮದ್, ಪಂಚಲ್ ಅವರ ದೂರಿನಲ್ಲಿ ಉಲ್ಲೇಖಿಸಿರುವ ಮೊಬೈಲ್ ಸಂಖ್ಯೆ ಅವರ ಮಗನಿಗೆ ಸೇರಿದೆ, ಆದರೆ ತನ್ನ ಮಗ ನಿರಪರಾಧಿ ಎಂದು ಹೇಳಿದ್ದಾರೆ. ಅವರು ಯಾರಿಗೂ ಬೆದರಿಕೆ ಹಾಕಿಲ್ಲ. ನಮ್ಮ ಪ್ರದೇಶದಲ್ಲಿ ನನ್ನ ಮಗನ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಬಾಗ್‌ಪತ್ ಮತ್ತು ಸಲೆಪುರ್ ಪರಸ್ಪರ ಎಷ್ಟು ದೂರವಿದೆ ಎಂದು ಯೋಚಿಸಿ ಎಂದಿದ್ದಾರೆ.

ಇನ್ನು ಆಶ್ಚರ್ಯಕರ ಸಂಗತಿಯೆಂದರೆ, ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ಗಮನಹರಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಕಟಕ್ ಪೊಲೀಸ್ ಅಧೀಕ್ಷಕ (ಗ್ರಾಮೀಣ), ಬಿ. ಜುಗಲ್ ಕಿಶೋರ್ ಅವರು ಅಹ್ಮದ್ ವಿರುದ್ಧದ ಪ್ರಕರಣದ ವಿವರಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೊಡ್ಡ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ. ಅವರ ಮುಸ್ಲಿಂ ಕುಟುಂಬವು ಈ ಪ್ರದೇಶದಲ್ಲಿ ಹೆಸರಾಂತ ಕುಟುಂಬವಾಗಿದೆ. ಅಹ್ಮದ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲ ಎಂದು ಸಲೇಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಿಹಾರ್ ಮಲ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಸಾಮಾಜಿಕ ಕಾರ್ಯಕರ್ತ ಬಿಡ್ಯುತ್ ಮೊಹಂತಿ ಅವರು ಅಹ್ಮದ್ ಅವರ ಬಂಧನವನ್ನು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣ ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ 2015 ರಲ್ಲಿ ದೆಹಲಿ ಮತ್ತು ಒಡಿಶಾ ಪೊಲೀಸರ ಜಂಟಿ ತಂಡವು 37 ವರ್ಷದ ಮುಸ್ಲಿಂ ಪಾದ್ರಿಯನ್ನು ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಬಂಧಿಸಿತ್ತು ಎಂಬುದು ಹಲವರಿಗೆ ನೆನಪಿದೆ. ಅರೇಬಿಕ್ ಮತ್ತು ಇಸ್ಲಾಮಿಕ್ ಅಧ್ಯಯನದಲ್ಲಿ ಪಿಎಚ್‌ಡಿ ಪದವಿ ಪಡೆದ ಮೌಲಾನಾ ಅಬ್ದುಲ್ ರೆಹಮಾನ್ ಅವರನ್ನು ಕಟಕ್‌ನ ಜಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಸ್ಚಿಮಾ ಕಚ್ಚಾ ಗ್ರಾಮದಿಂದ ಬಂಧಿಸಲಾಗಿತ್ತು.

ಈಗ ಸಯೀದ್ ಹಸನ್ ಅಹ್ಮದ್ ಬಂಧನ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳೀಯ ಪೊಲೀಸರ ಪ್ರಕಾರ ಆತನ ವಿರುದ್ಧ ಈವರೆಗೂ ಯಾವುದೇ ಪ್ರಕರಣಗಳಿಲ್ಲ. ನನ್ನ ಮಗ ನಿರಪರಾಧಿ ಎಂದು ತಂದೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಉತ್ತರ ಪ್ರದೇಶ ಪೊಲೀಸರು ಮಾತ್ರ ಸೆಕ್ಷನ್ 507 ಹಾಕಿದ್ದಾರೆ. ನಂತರ ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣವನ್ನು ಅಹ್ಮದ್ ಮೇಲೆ ಹಾಕಿದ್ದಾರೆ.


ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...