Homeಮುಖಪುಟಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರೆ ಮತ್ತು ಪ್ರಿಯದರ್ಶಿನಿ ರಾಜ್ಯ ಸಂಚಾಲಕಿ ಭವ್ಯ ನರಸಿಂಹಮೂರ್ತಿ ಅವರಿಗೆ ಸತತವಾಗಿ ಕಳೆದ 5 ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜೂನ್ 9 ರಿಂದ ಶುರುವಾಗಿರುವ ಈ ಬೆದರಿಕೆ ಕರೆಗಳ ಸಂಬಂಧ ಬೆಂಗಳೂರು ಪೊಲೀಸರಿಗೆ ಲಿಖಿತ ದೂರು ನೀಡಲಾಗಿದೆ. ಆದರೆ, 5 ದಿನಗಳಾದರೂ ಈ ಬಗ್ಗೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರಿಗೆ ದೂರು ನೀಡುವುದಾಗಿ ಭವ್ಯ ನರಸಿಂಹಮೂರ್ತಿ ತಿಳಿಸಿದ್ದಾರೆ.

ಘಟನೆ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ, ’ಜೂನ್ 8 ರ ಸಂಜೆ ಖಾಸಗಿ ಚಾನೆಲ್ ಒಂದರ ಚರ್ಚೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರವನನ್ನು ಟೀಕಿಸಿದ್ದೆ. ಆದಾದ ನಂತರ ಜೂನ್ 9 ರ ಮಧ್ಯಾಹ್ನ 12.30 ರಿಂದ ನಿರಂತರವಾಗಿ ಕರೆಗಳು ಬರಲು ಶುರುವಾದವು. ಸುಮಾರು 60 ಕ್ಕೂ ಹೆಚ್ಚು ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಆದರೆ, ಟ್ರೂ ಕಾಲರ್‌ನಲ್ಲಿ ಪಂಜಾಬ್, ಒಡಿಶಾ, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳ ಹೆಸರು ಬರುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಭವ್ಯ ನರಸಿಂಹಮೂರ್ತಿ ಎಂಬ ದಿಟ್ಟ ಹುಡುಗಿಯ ಪ್ರಶ್ನೆಗಳಿಗೆ ಮೋದಿ-ಶಾ ಬಳಿ ಉತ್ತರವಿವೆಯೇ?

’ಜೂನ್ 9 ರಂದೇ ನಾನು ಸೈಬರ್‌ ಬ್ರಾಂಚ್‌ಗೆ ದೂರು ನೀಡಿದ್ದೆ. ಆದರೆ ಇದು ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಕ್ರೈಂ ಬ್ರಾಂಚ್‌ಗೆ ದೂರು ನೀಡಿ ಎಂದರು. ಜೂನ್  10 ರಂದು ಅಲ್ಲಿಯೂ ದೂರು ನೀಡಿದ್ದೇವೆ. ಆದರೆ, ಯಾವುದೇ ಕ್ರಮ ಜರುಗಿಲ್ಲ. ಬೆದರಿಕೆ ಕರೆಗಳು ಬರುವುದು ತಪ್ಪಿಲ್ಲ. ಪೊಲೀಸಿನವರು ತಮ್ಮ ಕೆಲಸ ಮಾಡದೇ, ಸಿಮ್ ಬದಲಾಯಿಸಿ ಎಂಬ ಸಲಹೆ ನೀಡುತ್ತಾರೆ. ನಿಮ್ಮ ನಂಬರ್‌ ಕರೆ ಮಾಡುವವರಿಗೆ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ನನಗೆ ಕೇಳುತ್ತಾರೆ’ ಎಂದು ಅವರು ಕಿಡಿಕಾರಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿರುವ ಮಹಿಳೆಯ ನಂಬರ್‌ ದೊರೆಯುವುದು ಕಷ್ಟವೇ? ಎಲ್ಲರ ಬಳಿಯೂ ಇರುತ್ತದೆ. ಮಾಧ್ಯಮದವರ ಬಳಿಯೂ ಇರುತ್ತದೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ನಾನು ಇಲ್ಲಿಗೆ ಬಿಟ್ಟು ಸುಮ್ಮನೆ ಇರುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗುವವರೆಗೂ ಹೋರಾಡುತ್ತೇನೆ ಎಂದಿದ್ದಾರೆ.

ಮುಂದುವರೆದು, ’ಈ ಬೆದರಿಕೆ ಕರೆಗಳು ನನಗೆನೂ ಹೊಸದಲ್ಲ. ಸಿಎಎ, ಎನ್‌ಆರ್‌ಸಿ ಪ್ರತಿಭಟನೆಯ ಸಮಯದಲ್ಲಿಯೂ ಇದು ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕೆಟ್ಟ ಪದಗಳಲ್ಲಿ ಕಾಮೆಂಟ್ ಮಾಡುತ್ತಿದ್ದರು. ಫೇಸ್‌ಬುಕ್ ಹ್ಯಾಕ್ ಮಾಡಲಾಗಿತ್ತು. ಆಗಲೇ ನಾನು ಸೈಬರ್‌ ಕ್ರೈಂಗೆ ದೂರು ನೀಡಲು ಹೋಗಿ‌ದ್ದೆ. ಆದರೆ, ಅವರ ನಿಯಮಾವಳಿಗಳನ್ನೂ ನೋಡಿ ಸುಮ್ಮನಾದೆ. ಆದರೆ, ಈಗ ಮತ್ತೆ ಶುರುವಾಗಿದೆ. ಬಿಟ್ಟಷ್ಟು ಮತ್ತೆ ಜಾಸ್ತಿ ಮಾಡುತ್ತಾರೆ. ಹಾಗಾಗಿ ಈ ಬಾರಿ ನಾನು ದೃಢವಾಗಿ ನಿಂತಿದ್ದೇನೆ’ ಎಂದು ಭವ್ಯ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಈ ಪ್ರಕರಣದ ಕುರಿತು ಮುಖ್ಯಮಂತ್ರಿಗಳು, ಗೃಹ ಸಚಿವರು, ಪಕ್ಷಾತೀತವಾಗಿ ಮಹಿಳಾ ಸಂಸದರು, ಶಾಸಕರಿಗೆ ಪತ್ರ ಬರೆಯುತ್ತೇನೆ. ರಾಜಕೀಯದಲ್ಲಿ ಮಹಿಳೆಯರು ಉಳಿಯಬೇಕು ಎನ್ನುವವರು ಬೆಂಬಲ ನೀಡಿ ಎಂದು ಕೇಳುತ್ತೇನೆ’ ಎಂದು ಹೇಳಿದ್ದಾರೆ.

ಭಾನುವಾರ ಕೂಡ ಸಂಬಂಧಪಟ್ಟ ಪೊಲೀಸರಿಗೆ ಕರೆ ಮಾಡಿ ವಿಚಾರಿಸಿದ್ದೇವೆ. ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಲೇ ಇದ್ದಾರೆ. ಆದರೆ ಏನು ಮಾಡುತ್ತಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರ ಕಚೇರಿಗೆ ಹೋಗಿ ದೂರು ನೀಡುತ್ತೇನೆ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಭವ್ಯ ನರಸಿಂಹಮೂರ್ತಿ ತಮಗೆ ಬಂದ ಬೆದರಿಕೆ ಕರೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭವ್ಯ ಅವರಿಗೆ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...