Homeಮುಖಪುಟಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರೆ ಮತ್ತು ಪ್ರಿಯದರ್ಶಿನಿ ರಾಜ್ಯ ಸಂಚಾಲಕಿ ಭವ್ಯ ನರಸಿಂಹಮೂರ್ತಿ ಅವರಿಗೆ ಸತತವಾಗಿ ಕಳೆದ 5 ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜೂನ್ 9 ರಿಂದ ಶುರುವಾಗಿರುವ ಈ ಬೆದರಿಕೆ ಕರೆಗಳ ಸಂಬಂಧ ಬೆಂಗಳೂರು ಪೊಲೀಸರಿಗೆ ಲಿಖಿತ ದೂರು ನೀಡಲಾಗಿದೆ. ಆದರೆ, 5 ದಿನಗಳಾದರೂ ಈ ಬಗ್ಗೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರಿಗೆ ದೂರು ನೀಡುವುದಾಗಿ ಭವ್ಯ ನರಸಿಂಹಮೂರ್ತಿ ತಿಳಿಸಿದ್ದಾರೆ.

ಘಟನೆ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ, ’ಜೂನ್ 8 ರ ಸಂಜೆ ಖಾಸಗಿ ಚಾನೆಲ್ ಒಂದರ ಚರ್ಚೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರವನನ್ನು ಟೀಕಿಸಿದ್ದೆ. ಆದಾದ ನಂತರ ಜೂನ್ 9 ರ ಮಧ್ಯಾಹ್ನ 12.30 ರಿಂದ ನಿರಂತರವಾಗಿ ಕರೆಗಳು ಬರಲು ಶುರುವಾದವು. ಸುಮಾರು 60 ಕ್ಕೂ ಹೆಚ್ಚು ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಆದರೆ, ಟ್ರೂ ಕಾಲರ್‌ನಲ್ಲಿ ಪಂಜಾಬ್, ಒಡಿಶಾ, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳ ಹೆಸರು ಬರುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಭವ್ಯ ನರಸಿಂಹಮೂರ್ತಿ ಎಂಬ ದಿಟ್ಟ ಹುಡುಗಿಯ ಪ್ರಶ್ನೆಗಳಿಗೆ ಮೋದಿ-ಶಾ ಬಳಿ ಉತ್ತರವಿವೆಯೇ?

’ಜೂನ್ 9 ರಂದೇ ನಾನು ಸೈಬರ್‌ ಬ್ರಾಂಚ್‌ಗೆ ದೂರು ನೀಡಿದ್ದೆ. ಆದರೆ ಇದು ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಕ್ರೈಂ ಬ್ರಾಂಚ್‌ಗೆ ದೂರು ನೀಡಿ ಎಂದರು. ಜೂನ್  10 ರಂದು ಅಲ್ಲಿಯೂ ದೂರು ನೀಡಿದ್ದೇವೆ. ಆದರೆ, ಯಾವುದೇ ಕ್ರಮ ಜರುಗಿಲ್ಲ. ಬೆದರಿಕೆ ಕರೆಗಳು ಬರುವುದು ತಪ್ಪಿಲ್ಲ. ಪೊಲೀಸಿನವರು ತಮ್ಮ ಕೆಲಸ ಮಾಡದೇ, ಸಿಮ್ ಬದಲಾಯಿಸಿ ಎಂಬ ಸಲಹೆ ನೀಡುತ್ತಾರೆ. ನಿಮ್ಮ ನಂಬರ್‌ ಕರೆ ಮಾಡುವವರಿಗೆ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ನನಗೆ ಕೇಳುತ್ತಾರೆ’ ಎಂದು ಅವರು ಕಿಡಿಕಾರಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿರುವ ಮಹಿಳೆಯ ನಂಬರ್‌ ದೊರೆಯುವುದು ಕಷ್ಟವೇ? ಎಲ್ಲರ ಬಳಿಯೂ ಇರುತ್ತದೆ. ಮಾಧ್ಯಮದವರ ಬಳಿಯೂ ಇರುತ್ತದೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ನಾನು ಇಲ್ಲಿಗೆ ಬಿಟ್ಟು ಸುಮ್ಮನೆ ಇರುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗುವವರೆಗೂ ಹೋರಾಡುತ್ತೇನೆ ಎಂದಿದ್ದಾರೆ.

ಮುಂದುವರೆದು, ’ಈ ಬೆದರಿಕೆ ಕರೆಗಳು ನನಗೆನೂ ಹೊಸದಲ್ಲ. ಸಿಎಎ, ಎನ್‌ಆರ್‌ಸಿ ಪ್ರತಿಭಟನೆಯ ಸಮಯದಲ್ಲಿಯೂ ಇದು ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕೆಟ್ಟ ಪದಗಳಲ್ಲಿ ಕಾಮೆಂಟ್ ಮಾಡುತ್ತಿದ್ದರು. ಫೇಸ್‌ಬುಕ್ ಹ್ಯಾಕ್ ಮಾಡಲಾಗಿತ್ತು. ಆಗಲೇ ನಾನು ಸೈಬರ್‌ ಕ್ರೈಂಗೆ ದೂರು ನೀಡಲು ಹೋಗಿ‌ದ್ದೆ. ಆದರೆ, ಅವರ ನಿಯಮಾವಳಿಗಳನ್ನೂ ನೋಡಿ ಸುಮ್ಮನಾದೆ. ಆದರೆ, ಈಗ ಮತ್ತೆ ಶುರುವಾಗಿದೆ. ಬಿಟ್ಟಷ್ಟು ಮತ್ತೆ ಜಾಸ್ತಿ ಮಾಡುತ್ತಾರೆ. ಹಾಗಾಗಿ ಈ ಬಾರಿ ನಾನು ದೃಢವಾಗಿ ನಿಂತಿದ್ದೇನೆ’ ಎಂದು ಭವ್ಯ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಈ ಪ್ರಕರಣದ ಕುರಿತು ಮುಖ್ಯಮಂತ್ರಿಗಳು, ಗೃಹ ಸಚಿವರು, ಪಕ್ಷಾತೀತವಾಗಿ ಮಹಿಳಾ ಸಂಸದರು, ಶಾಸಕರಿಗೆ ಪತ್ರ ಬರೆಯುತ್ತೇನೆ. ರಾಜಕೀಯದಲ್ಲಿ ಮಹಿಳೆಯರು ಉಳಿಯಬೇಕು ಎನ್ನುವವರು ಬೆಂಬಲ ನೀಡಿ ಎಂದು ಕೇಳುತ್ತೇನೆ’ ಎಂದು ಹೇಳಿದ್ದಾರೆ.

ಭಾನುವಾರ ಕೂಡ ಸಂಬಂಧಪಟ್ಟ ಪೊಲೀಸರಿಗೆ ಕರೆ ಮಾಡಿ ವಿಚಾರಿಸಿದ್ದೇವೆ. ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಲೇ ಇದ್ದಾರೆ. ಆದರೆ ಏನು ಮಾಡುತ್ತಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರ ಕಚೇರಿಗೆ ಹೋಗಿ ದೂರು ನೀಡುತ್ತೇನೆ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಭವ್ಯ ನರಸಿಂಹಮೂರ್ತಿ ತಮಗೆ ಬಂದ ಬೆದರಿಕೆ ಕರೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭವ್ಯ ಅವರಿಗೆ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...