Homeಮುಖಪುಟಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರೆ ಮತ್ತು ಪ್ರಿಯದರ್ಶಿನಿ ರಾಜ್ಯ ಸಂಚಾಲಕಿ ಭವ್ಯ ನರಸಿಂಹಮೂರ್ತಿ ಅವರಿಗೆ ಸತತವಾಗಿ ಕಳೆದ 5 ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜೂನ್ 9 ರಿಂದ ಶುರುವಾಗಿರುವ ಈ ಬೆದರಿಕೆ ಕರೆಗಳ ಸಂಬಂಧ ಬೆಂಗಳೂರು ಪೊಲೀಸರಿಗೆ ಲಿಖಿತ ದೂರು ನೀಡಲಾಗಿದೆ. ಆದರೆ, 5 ದಿನಗಳಾದರೂ ಈ ಬಗ್ಗೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರಿಗೆ ದೂರು ನೀಡುವುದಾಗಿ ಭವ್ಯ ನರಸಿಂಹಮೂರ್ತಿ ತಿಳಿಸಿದ್ದಾರೆ.

ಘಟನೆ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ, ’ಜೂನ್ 8 ರ ಸಂಜೆ ಖಾಸಗಿ ಚಾನೆಲ್ ಒಂದರ ಚರ್ಚೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರವನನ್ನು ಟೀಕಿಸಿದ್ದೆ. ಆದಾದ ನಂತರ ಜೂನ್ 9 ರ ಮಧ್ಯಾಹ್ನ 12.30 ರಿಂದ ನಿರಂತರವಾಗಿ ಕರೆಗಳು ಬರಲು ಶುರುವಾದವು. ಸುಮಾರು 60 ಕ್ಕೂ ಹೆಚ್ಚು ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಆದರೆ, ಟ್ರೂ ಕಾಲರ್‌ನಲ್ಲಿ ಪಂಜಾಬ್, ಒಡಿಶಾ, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳ ಹೆಸರು ಬರುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಭವ್ಯ ನರಸಿಂಹಮೂರ್ತಿ ಎಂಬ ದಿಟ್ಟ ಹುಡುಗಿಯ ಪ್ರಶ್ನೆಗಳಿಗೆ ಮೋದಿ-ಶಾ ಬಳಿ ಉತ್ತರವಿವೆಯೇ?

’ಜೂನ್ 9 ರಂದೇ ನಾನು ಸೈಬರ್‌ ಬ್ರಾಂಚ್‌ಗೆ ದೂರು ನೀಡಿದ್ದೆ. ಆದರೆ ಇದು ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಕ್ರೈಂ ಬ್ರಾಂಚ್‌ಗೆ ದೂರು ನೀಡಿ ಎಂದರು. ಜೂನ್  10 ರಂದು ಅಲ್ಲಿಯೂ ದೂರು ನೀಡಿದ್ದೇವೆ. ಆದರೆ, ಯಾವುದೇ ಕ್ರಮ ಜರುಗಿಲ್ಲ. ಬೆದರಿಕೆ ಕರೆಗಳು ಬರುವುದು ತಪ್ಪಿಲ್ಲ. ಪೊಲೀಸಿನವರು ತಮ್ಮ ಕೆಲಸ ಮಾಡದೇ, ಸಿಮ್ ಬದಲಾಯಿಸಿ ಎಂಬ ಸಲಹೆ ನೀಡುತ್ತಾರೆ. ನಿಮ್ಮ ನಂಬರ್‌ ಕರೆ ಮಾಡುವವರಿಗೆ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ನನಗೆ ಕೇಳುತ್ತಾರೆ’ ಎಂದು ಅವರು ಕಿಡಿಕಾರಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿರುವ ಮಹಿಳೆಯ ನಂಬರ್‌ ದೊರೆಯುವುದು ಕಷ್ಟವೇ? ಎಲ್ಲರ ಬಳಿಯೂ ಇರುತ್ತದೆ. ಮಾಧ್ಯಮದವರ ಬಳಿಯೂ ಇರುತ್ತದೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ನಾನು ಇಲ್ಲಿಗೆ ಬಿಟ್ಟು ಸುಮ್ಮನೆ ಇರುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗುವವರೆಗೂ ಹೋರಾಡುತ್ತೇನೆ ಎಂದಿದ್ದಾರೆ.

ಮುಂದುವರೆದು, ’ಈ ಬೆದರಿಕೆ ಕರೆಗಳು ನನಗೆನೂ ಹೊಸದಲ್ಲ. ಸಿಎಎ, ಎನ್‌ಆರ್‌ಸಿ ಪ್ರತಿಭಟನೆಯ ಸಮಯದಲ್ಲಿಯೂ ಇದು ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕೆಟ್ಟ ಪದಗಳಲ್ಲಿ ಕಾಮೆಂಟ್ ಮಾಡುತ್ತಿದ್ದರು. ಫೇಸ್‌ಬುಕ್ ಹ್ಯಾಕ್ ಮಾಡಲಾಗಿತ್ತು. ಆಗಲೇ ನಾನು ಸೈಬರ್‌ ಕ್ರೈಂಗೆ ದೂರು ನೀಡಲು ಹೋಗಿ‌ದ್ದೆ. ಆದರೆ, ಅವರ ನಿಯಮಾವಳಿಗಳನ್ನೂ ನೋಡಿ ಸುಮ್ಮನಾದೆ. ಆದರೆ, ಈಗ ಮತ್ತೆ ಶುರುವಾಗಿದೆ. ಬಿಟ್ಟಷ್ಟು ಮತ್ತೆ ಜಾಸ್ತಿ ಮಾಡುತ್ತಾರೆ. ಹಾಗಾಗಿ ಈ ಬಾರಿ ನಾನು ದೃಢವಾಗಿ ನಿಂತಿದ್ದೇನೆ’ ಎಂದು ಭವ್ಯ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಈ ಪ್ರಕರಣದ ಕುರಿತು ಮುಖ್ಯಮಂತ್ರಿಗಳು, ಗೃಹ ಸಚಿವರು, ಪಕ್ಷಾತೀತವಾಗಿ ಮಹಿಳಾ ಸಂಸದರು, ಶಾಸಕರಿಗೆ ಪತ್ರ ಬರೆಯುತ್ತೇನೆ. ರಾಜಕೀಯದಲ್ಲಿ ಮಹಿಳೆಯರು ಉಳಿಯಬೇಕು ಎನ್ನುವವರು ಬೆಂಬಲ ನೀಡಿ ಎಂದು ಕೇಳುತ್ತೇನೆ’ ಎಂದು ಹೇಳಿದ್ದಾರೆ.

ಭಾನುವಾರ ಕೂಡ ಸಂಬಂಧಪಟ್ಟ ಪೊಲೀಸರಿಗೆ ಕರೆ ಮಾಡಿ ವಿಚಾರಿಸಿದ್ದೇವೆ. ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಲೇ ಇದ್ದಾರೆ. ಆದರೆ ಏನು ಮಾಡುತ್ತಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರ ಕಚೇರಿಗೆ ಹೋಗಿ ದೂರು ನೀಡುತ್ತೇನೆ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಭವ್ಯ ನರಸಿಂಹಮೂರ್ತಿ ತಮಗೆ ಬಂದ ಬೆದರಿಕೆ ಕರೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭವ್ಯ ಅವರಿಗೆ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...