Homeಮುಖಪುಟಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿಗೆ ಬೆದರಿಕೆ ಕರೆ: 5 ದಿನಗಳಾದರೂ ಪೋಲೀಸರು ಕ್ರಮ ಕೈಗೊಳ್ಳದ ಆರೋಪ!

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರೆ ಮತ್ತು ಪ್ರಿಯದರ್ಶಿನಿ ರಾಜ್ಯ ಸಂಚಾಲಕಿ ಭವ್ಯ ನರಸಿಂಹಮೂರ್ತಿ ಅವರಿಗೆ ಸತತವಾಗಿ ಕಳೆದ 5 ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜೂನ್ 9 ರಿಂದ ಶುರುವಾಗಿರುವ ಈ ಬೆದರಿಕೆ ಕರೆಗಳ ಸಂಬಂಧ ಬೆಂಗಳೂರು ಪೊಲೀಸರಿಗೆ ಲಿಖಿತ ದೂರು ನೀಡಲಾಗಿದೆ. ಆದರೆ, 5 ದಿನಗಳಾದರೂ ಈ ಬಗ್ಗೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರಿಗೆ ದೂರು ನೀಡುವುದಾಗಿ ಭವ್ಯ ನರಸಿಂಹಮೂರ್ತಿ ತಿಳಿಸಿದ್ದಾರೆ.

ಘಟನೆ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ, ’ಜೂನ್ 8 ರ ಸಂಜೆ ಖಾಸಗಿ ಚಾನೆಲ್ ಒಂದರ ಚರ್ಚೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ನಿರ್ವಹಣೆ ಬಗ್ಗೆ ಬಿಜೆಪಿ ಸರ್ಕಾರವನನ್ನು ಟೀಕಿಸಿದ್ದೆ. ಆದಾದ ನಂತರ ಜೂನ್ 9 ರ ಮಧ್ಯಾಹ್ನ 12.30 ರಿಂದ ನಿರಂತರವಾಗಿ ಕರೆಗಳು ಬರಲು ಶುರುವಾದವು. ಸುಮಾರು 60 ಕ್ಕೂ ಹೆಚ್ಚು ನಂಬರ್‌ಗಳಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಆದರೆ, ಟ್ರೂ ಕಾಲರ್‌ನಲ್ಲಿ ಪಂಜಾಬ್, ಒಡಿಶಾ, ಆಂಧ್ರ ಪ್ರದೇಶ ಮುಂತಾದ ರಾಜ್ಯಗಳ ಹೆಸರು ಬರುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಭವ್ಯ ನರಸಿಂಹಮೂರ್ತಿ ಎಂಬ ದಿಟ್ಟ ಹುಡುಗಿಯ ಪ್ರಶ್ನೆಗಳಿಗೆ ಮೋದಿ-ಶಾ ಬಳಿ ಉತ್ತರವಿವೆಯೇ?

’ಜೂನ್ 9 ರಂದೇ ನಾನು ಸೈಬರ್‌ ಬ್ರಾಂಚ್‌ಗೆ ದೂರು ನೀಡಿದ್ದೆ. ಆದರೆ ಇದು ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಕ್ರೈಂ ಬ್ರಾಂಚ್‌ಗೆ ದೂರು ನೀಡಿ ಎಂದರು. ಜೂನ್  10 ರಂದು ಅಲ್ಲಿಯೂ ದೂರು ನೀಡಿದ್ದೇವೆ. ಆದರೆ, ಯಾವುದೇ ಕ್ರಮ ಜರುಗಿಲ್ಲ. ಬೆದರಿಕೆ ಕರೆಗಳು ಬರುವುದು ತಪ್ಪಿಲ್ಲ. ಪೊಲೀಸಿನವರು ತಮ್ಮ ಕೆಲಸ ಮಾಡದೇ, ಸಿಮ್ ಬದಲಾಯಿಸಿ ಎಂಬ ಸಲಹೆ ನೀಡುತ್ತಾರೆ. ನಿಮ್ಮ ನಂಬರ್‌ ಕರೆ ಮಾಡುವವರಿಗೆ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ನನಗೆ ಕೇಳುತ್ತಾರೆ’ ಎಂದು ಅವರು ಕಿಡಿಕಾರಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿರುವ ಮಹಿಳೆಯ ನಂಬರ್‌ ದೊರೆಯುವುದು ಕಷ್ಟವೇ? ಎಲ್ಲರ ಬಳಿಯೂ ಇರುತ್ತದೆ. ಮಾಧ್ಯಮದವರ ಬಳಿಯೂ ಇರುತ್ತದೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ನಾನು ಇಲ್ಲಿಗೆ ಬಿಟ್ಟು ಸುಮ್ಮನೆ ಇರುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗುವವರೆಗೂ ಹೋರಾಡುತ್ತೇನೆ ಎಂದಿದ್ದಾರೆ.

ಮುಂದುವರೆದು, ’ಈ ಬೆದರಿಕೆ ಕರೆಗಳು ನನಗೆನೂ ಹೊಸದಲ್ಲ. ಸಿಎಎ, ಎನ್‌ಆರ್‌ಸಿ ಪ್ರತಿಭಟನೆಯ ಸಮಯದಲ್ಲಿಯೂ ಇದು ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕೆಟ್ಟ ಪದಗಳಲ್ಲಿ ಕಾಮೆಂಟ್ ಮಾಡುತ್ತಿದ್ದರು. ಫೇಸ್‌ಬುಕ್ ಹ್ಯಾಕ್ ಮಾಡಲಾಗಿತ್ತು. ಆಗಲೇ ನಾನು ಸೈಬರ್‌ ಕ್ರೈಂಗೆ ದೂರು ನೀಡಲು ಹೋಗಿ‌ದ್ದೆ. ಆದರೆ, ಅವರ ನಿಯಮಾವಳಿಗಳನ್ನೂ ನೋಡಿ ಸುಮ್ಮನಾದೆ. ಆದರೆ, ಈಗ ಮತ್ತೆ ಶುರುವಾಗಿದೆ. ಬಿಟ್ಟಷ್ಟು ಮತ್ತೆ ಜಾಸ್ತಿ ಮಾಡುತ್ತಾರೆ. ಹಾಗಾಗಿ ಈ ಬಾರಿ ನಾನು ದೃಢವಾಗಿ ನಿಂತಿದ್ದೇನೆ’ ಎಂದು ಭವ್ಯ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

’ಕಾಂಗ್ರೆಸ್‌ನಂತಹ ದೊಡ್ಡ ಪಕ್ಷದ ಬೆಂಬಲ ಇರುವ ನನಗೆ ಇಂತಹ ತೊಂದರೆಗಳು ಇರಬೇಕಾದರೇ, ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬೇಡ..? ಈ ಪ್ರಕರಣದ ಕುರಿತು ಮುಖ್ಯಮಂತ್ರಿಗಳು, ಗೃಹ ಸಚಿವರು, ಪಕ್ಷಾತೀತವಾಗಿ ಮಹಿಳಾ ಸಂಸದರು, ಶಾಸಕರಿಗೆ ಪತ್ರ ಬರೆಯುತ್ತೇನೆ. ರಾಜಕೀಯದಲ್ಲಿ ಮಹಿಳೆಯರು ಉಳಿಯಬೇಕು ಎನ್ನುವವರು ಬೆಂಬಲ ನೀಡಿ ಎಂದು ಕೇಳುತ್ತೇನೆ’ ಎಂದು ಹೇಳಿದ್ದಾರೆ.

ಭಾನುವಾರ ಕೂಡ ಸಂಬಂಧಪಟ್ಟ ಪೊಲೀಸರಿಗೆ ಕರೆ ಮಾಡಿ ವಿಚಾರಿಸಿದ್ದೇವೆ. ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಲೇ ಇದ್ದಾರೆ. ಆದರೆ ಏನು ಮಾಡುತ್ತಿಲ್ಲ. ಹಾಗಾಗಿ ಸೋಮವಾರ ಕಮಿಷನರ್‌ ಅವರ ಕಚೇರಿಗೆ ಹೋಗಿ ದೂರು ನೀಡುತ್ತೇನೆ ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಭವ್ಯ ನರಸಿಂಹಮೂರ್ತಿ ತಮಗೆ ಬಂದ ಬೆದರಿಕೆ ಕರೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭವ್ಯ ಅವರಿಗೆ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...