Homeಮುಖಪುಟಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

- Advertisement -
- Advertisement -

ಕಾಂಗ್ರೆಸ್‌ನ ಮೈತ್ರಿಕೂಟ ಪಕ್ಷಕ್ಕೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯೆಲ್ಲಿ ರಾಜ್ಯ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಅಸ್ಸಾಂ ಚುನಾವಣಾ ಆಯೋಗ ನಿಷೇಧ ಹೇರಿದೆ.

ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗ ಶುಕ್ರವಾರ ತಡರಾತ್ರಿ ತನ್ನ ಆದೇಶ ಹೊರಡಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೆಸರನ್ನು ದುರುಪಯೋಗಪಡಿಸಿಕೊಂಡು ಹಗ್ರಾಮ ಮೊಹಿಲರಿ ಅವರನ್ನು ಜೈಲಿಗೆ ಕಳುಹಿಸುವುದಾಗಿ ಶರ್ಮಾ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ದೂರಿದೆ. ಹಗ್ರಾಮ ಮೊಹಿಲರಿ ನೇತೃತ್ವದ ಬಿಪಿಎಫ್ (ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್) ವಿರೋಧ ಪಕ್ಷದ ಮೈತ್ರಿಕೂಟದಲ್ಲಿದೆ.

ಗುರುವಾರ ಚುನಾವಣಾ ಆಯೋಗವು ಶರ್ಮಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಅದಕ್ಕೆ ಅವರು ಇಂದು ಉತ್ತರಿಸಿದ್ದಾರೆ. ಅವರ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪರಿಗಣಿಸಲಾಗಿದೆ. ಮಾರ್ಚ್ 28 ರಂದು ತನ್ನ ಭಾಷಣದಲ್ಲಿ ಶರ್ಮಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

“ಹಗ್ರಾಮ ಮೊಹಿಲರಿ ಉಗ್ರವಾದ ಚಟುವಟಿಕೆಯಲ್ಲಿ ತೊಡಗಿದರೆ… ಆತ ಜೈಲಿಗೆ ಹೋಗುತ್ತಾನೆ. ಇದು ನೇರವಾದ ಮಾತು… ಈಗಾಗಲೇ ಸಾಕಷ್ಟು ಪುರಾವೆಗಳು ದೊರೆತಿವೆ. ಈ ಪ್ರಕರಣವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ನೀಡಲಾಗುತ್ತಿದೆ. ಕೊಕ್ರಜಹಾರ್ ನಲ್ಲಿ ಕಾರಿನೊಳಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣವನ್ನು ಎನ್ಐಎಗೆ ನೀಡಲಾಗುತ್ತಿದೆ. ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಹಗ್ರಾಮ ಸಹಿತ ಯಾರಿಗೂ ಅಶಾಂತಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ”ಎಂದು ಶರ್ಮಾ ಹೇಳಿದ್ದರು.

ಮಂಗಳವಾರ ನಡೆಯಲಿರುವ ಮೂರನೇ ಮತ್ತು ಅಂತಿಮ ಹಂತದ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಈ ಕ್ರಮ ಕೈಗೊಂಡಿದೆ. ಜೊತೆಗೆ ಚುನಾವಣಾ ಆಯೋಗವು ಅವರ ಸಹೋದರ ಮತ್ತು ಗೋಲ್ಪಾರ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವಾ ಶರ್ಮಾ ಅವರನ್ನು ಜಿಲ್ಲೆಯಿಂದ ವರ್ಗಾಯಿಸಿದೆ.

ಆಯೋಗವು ಶುಕ್ರವಾರ ಹೊರಡಿಸಿದ ಆದೇಶದಲ್ಲಿ, ಸುಶಾಂತ ಬಿಸ್ವಾ ಶರ್ಮಾ ಅವರನ್ನು ರಾಜ್ಯ ಕೇಂದ್ರ ಕಚೇರಿಯಲ್ಲಿ ಸೂಕ್ತ ಹುದ್ದೆಗೆ ವರ್ಗಾಯಿಸಲಾಗುವುದು ಮತ್ತು ಐಪಿಎಸ್ ಅಧಿಕಾರಿ ವೀರ ವೆಂಕಟ ರಾಕೇಶ್ ರೆಡ್ಡಿ ಅವರನ್ನು ಗೋಲ್ಪಾರ ಜಿಲ್ಲೆಯ ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಕ್ಷಣವೇ ನೇಮಿಸಲಾಗುವುದು ಎಂದು ಹೇಳಿದೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...