Homeಮುಖಪುಟಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

- Advertisement -
- Advertisement -

ಕಾಂಗ್ರೆಸ್‌ನ ಮೈತ್ರಿಕೂಟ ಪಕ್ಷಕ್ಕೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯೆಲ್ಲಿ ರಾಜ್ಯ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಅಸ್ಸಾಂ ಚುನಾವಣಾ ಆಯೋಗ ನಿಷೇಧ ಹೇರಿದೆ.

ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗ ಶುಕ್ರವಾರ ತಡರಾತ್ರಿ ತನ್ನ ಆದೇಶ ಹೊರಡಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೆಸರನ್ನು ದುರುಪಯೋಗಪಡಿಸಿಕೊಂಡು ಹಗ್ರಾಮ ಮೊಹಿಲರಿ ಅವರನ್ನು ಜೈಲಿಗೆ ಕಳುಹಿಸುವುದಾಗಿ ಶರ್ಮಾ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ದೂರಿದೆ. ಹಗ್ರಾಮ ಮೊಹಿಲರಿ ನೇತೃತ್ವದ ಬಿಪಿಎಫ್ (ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್) ವಿರೋಧ ಪಕ್ಷದ ಮೈತ್ರಿಕೂಟದಲ್ಲಿದೆ.

ಗುರುವಾರ ಚುನಾವಣಾ ಆಯೋಗವು ಶರ್ಮಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಅದಕ್ಕೆ ಅವರು ಇಂದು ಉತ್ತರಿಸಿದ್ದಾರೆ. ಅವರ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪರಿಗಣಿಸಲಾಗಿದೆ. ಮಾರ್ಚ್ 28 ರಂದು ತನ್ನ ಭಾಷಣದಲ್ಲಿ ಶರ್ಮಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

“ಹಗ್ರಾಮ ಮೊಹಿಲರಿ ಉಗ್ರವಾದ ಚಟುವಟಿಕೆಯಲ್ಲಿ ತೊಡಗಿದರೆ… ಆತ ಜೈಲಿಗೆ ಹೋಗುತ್ತಾನೆ. ಇದು ನೇರವಾದ ಮಾತು… ಈಗಾಗಲೇ ಸಾಕಷ್ಟು ಪುರಾವೆಗಳು ದೊರೆತಿವೆ. ಈ ಪ್ರಕರಣವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ನೀಡಲಾಗುತ್ತಿದೆ. ಕೊಕ್ರಜಹಾರ್ ನಲ್ಲಿ ಕಾರಿನೊಳಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣವನ್ನು ಎನ್ಐಎಗೆ ನೀಡಲಾಗುತ್ತಿದೆ. ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಹಗ್ರಾಮ ಸಹಿತ ಯಾರಿಗೂ ಅಶಾಂತಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ”ಎಂದು ಶರ್ಮಾ ಹೇಳಿದ್ದರು.

ಮಂಗಳವಾರ ನಡೆಯಲಿರುವ ಮೂರನೇ ಮತ್ತು ಅಂತಿಮ ಹಂತದ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಈ ಕ್ರಮ ಕೈಗೊಂಡಿದೆ. ಜೊತೆಗೆ ಚುನಾವಣಾ ಆಯೋಗವು ಅವರ ಸಹೋದರ ಮತ್ತು ಗೋಲ್ಪಾರ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವಾ ಶರ್ಮಾ ಅವರನ್ನು ಜಿಲ್ಲೆಯಿಂದ ವರ್ಗಾಯಿಸಿದೆ.

ಆಯೋಗವು ಶುಕ್ರವಾರ ಹೊರಡಿಸಿದ ಆದೇಶದಲ್ಲಿ, ಸುಶಾಂತ ಬಿಸ್ವಾ ಶರ್ಮಾ ಅವರನ್ನು ರಾಜ್ಯ ಕೇಂದ್ರ ಕಚೇರಿಯಲ್ಲಿ ಸೂಕ್ತ ಹುದ್ದೆಗೆ ವರ್ಗಾಯಿಸಲಾಗುವುದು ಮತ್ತು ಐಪಿಎಸ್ ಅಧಿಕಾರಿ ವೀರ ವೆಂಕಟ ರಾಕೇಶ್ ರೆಡ್ಡಿ ಅವರನ್ನು ಗೋಲ್ಪಾರ ಜಿಲ್ಲೆಯ ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಕ್ಷಣವೇ ನೇಮಿಸಲಾಗುವುದು ಎಂದು ಹೇಳಿದೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....