Homeಮುಖಪುಟ‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

"ಹಿಂದೂ ರಾಷ್ಟ್ರೀಯತೆ" ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದರೆ ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

- Advertisement -
- Advertisement -

“ಹಿಂದೂ ರಾಷ್ಟ್ರೀಯತೆ” ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದವರನ್ನು ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

ಸೆ.9 ರಂದು ಗಾರ್ಡಿಯನ್ ವರದಿ ಪ್ರಕಟಿಸಿದ್ದು, ಹಲವು ವಿದ್ವಾಂಸರನ್ನು ಹಿಂದೂ ವಿರೋಧಿಗಳೆಂದು ದೂಷಿಸಿ, ಅವರು ವಿಚಾರ ವಿಚಾರಸಂಕಿರಣದಿಂದ ಹಿಂದೆ ಸರಿಯುವಂತೆ ಹಿಂದುತ್ವವಾದಿ ಉಗ್ರರು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಮ್ಮೇಳನವು “ಜಾಗತಿಕ ಹಿಂದುತ್ವದ ನಿರ್ನಾಮ” ಎಂಬ ಹೆಸರಿನಲ್ಲಿದೆ. ಹಾರ್ವಾಡ್, ಸ್ಟಾಂಡ್‌ಫಾರ್ಡ್, ಪ್ರಿನ್ಸ್‌ಟನ್‌, ಕೊಲಂಬಿಯ, ಬರ್ಕ್ಲಿ, ಚಿಕಾಗೋ, ಪೆನ್ಸಿಲ್‌ವೇನಿಯ, ರುಟ್‌ಗರ್ಸ್ ಸೇರಿದಂತೆ 53ಕ್ಕೂ ಹೆಚ್ಚು ವಿವಿಗಳು ಈ ಸಮ್ಮೇಳನದ ಸಹ ಪ್ರಯೋಜಕತ್ವ ಹೊಂದಿವೆ.

ಸಮ್ಮೇಳನ ಉದ್ದೇಶವನ್ನು ಚರ್ಚಿಯಲು ಸೆ.10ರಂದು ಆಯೋಜಿಸಲಾಗಿತ್ತು. ಹಿಂದುತ್ವ ಗುಂಪುಗಳು, ಜಾತ್ಯತೀತ ರಾಷ್ಟ್ರವನ್ನು ನಿರ್ನಾಮ ಮಾಡಿ, ಹಿಂದೂರಾಷ್ಟ್ರ ಕಟ್ಟುವ ಸಂಬಂಧ ಮಾಡುತ್ತಿರುವ ಪ್ರಯತ್ನಗಳ ಕುರಿತು ವಿದ್ವಾಂಸರು ಚರ್ಚಿಸಲಿದ್ದರು ಎಂದು ವರದಿ ಉಲ್ಲೇಖಿಸಿದೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷ ಬಿಜೆಪಿಯು ಹಿಂದೂ ರಾಷ್ಟ್ರೀಯ ಅಜೆಂಡಾವನ್ನು ಮುನ್ನಲೆಗೆ ತಂದಿದೆ. ಸುಮಾರು 20 ಕೋಟಿ ಮುಸ್ಲಿಮರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದನ್ನು ಗಾರ್ಡಿಯನ್ ಉಲ್ಲೇಖಿಸಿದೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡಲು ಹಿಂದುತ್ವವಾದಿ ಗುಂಪುಗಳು ಸಜ್ಜಾಗಿವೆ. ವಿವಿಗಳು ಹಿಂದೆ ಸರಿಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸಮ್ಮೇಳನದ ಆಯೋಜಕರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ತಮ್ಮ ಕುಟುಂಬಕ್ಕೆ ಮರಳುವುದನ್ನು ನಿಷೇಧಿಸುವ ಭಯದಿಂದ ಅಥವಾ ಭಾರತಕ್ಕೆ ಮರಳಿದಾಗ ಬಂಧಿಸುವ ಭಯದಿಂದ ಅನೇಕರು ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ. ಹತ್ತಾರು ಭಾಷಣಕಾರರು ಹಾಗೂ ಸಂಘಟನಾಕಾರರ ಕುಟುಂಬದವರಿಗೆ ಬೆದರಿಕೆ ಒಡ್ಡಲಾಗಿದೆ. ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಸಮ್ಮೇಳನದ ಅಧ್ಯಕ್ಷರಿಗೆ, ವಿಶ್ವವಿದ್ಯಾನಿಲಯಗಳಿಗೆ 10 ಲಕ್ಷಕ್ಕೂ ಹೆಚ್ಚು ಇಮೇಲ್‌ ಮಾಡಲಾಗಿದ್ದು, ಸಮ್ಮೇಳನದಿಂದ ಹಿಂದೆ ಸರಿಯುವಂತೆ ಎಚ್ಚರಿಸಲಾಗಿದೆ. ನ್ಯೂಜೆರ್ಸಿಯ ಡ್ರೂ ವಿವಿಯು ಕೆಲವೇ ನಿಮಿಷಗಳಲ್ಲಿ 30,000 ಇಮೇಲ್‌ಗಳನ್ನು ಸ್ವೀಕರಿಸಿದೆ ಮತ್ತು ವಿವಿಯ ಸರ್ವರ್‌ ಹಾನಿಯಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...