Homeಮುಖಪುಟ‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

"ಹಿಂದೂ ರಾಷ್ಟ್ರೀಯತೆ" ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದರೆ ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

- Advertisement -
- Advertisement -

“ಹಿಂದೂ ರಾಷ್ಟ್ರೀಯತೆ” ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದವರನ್ನು ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

ಸೆ.9 ರಂದು ಗಾರ್ಡಿಯನ್ ವರದಿ ಪ್ರಕಟಿಸಿದ್ದು, ಹಲವು ವಿದ್ವಾಂಸರನ್ನು ಹಿಂದೂ ವಿರೋಧಿಗಳೆಂದು ದೂಷಿಸಿ, ಅವರು ವಿಚಾರ ವಿಚಾರಸಂಕಿರಣದಿಂದ ಹಿಂದೆ ಸರಿಯುವಂತೆ ಹಿಂದುತ್ವವಾದಿ ಉಗ್ರರು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಮ್ಮೇಳನವು “ಜಾಗತಿಕ ಹಿಂದುತ್ವದ ನಿರ್ನಾಮ” ಎಂಬ ಹೆಸರಿನಲ್ಲಿದೆ. ಹಾರ್ವಾಡ್, ಸ್ಟಾಂಡ್‌ಫಾರ್ಡ್, ಪ್ರಿನ್ಸ್‌ಟನ್‌, ಕೊಲಂಬಿಯ, ಬರ್ಕ್ಲಿ, ಚಿಕಾಗೋ, ಪೆನ್ಸಿಲ್‌ವೇನಿಯ, ರುಟ್‌ಗರ್ಸ್ ಸೇರಿದಂತೆ 53ಕ್ಕೂ ಹೆಚ್ಚು ವಿವಿಗಳು ಈ ಸಮ್ಮೇಳನದ ಸಹ ಪ್ರಯೋಜಕತ್ವ ಹೊಂದಿವೆ.

ಸಮ್ಮೇಳನ ಉದ್ದೇಶವನ್ನು ಚರ್ಚಿಯಲು ಸೆ.10ರಂದು ಆಯೋಜಿಸಲಾಗಿತ್ತು. ಹಿಂದುತ್ವ ಗುಂಪುಗಳು, ಜಾತ್ಯತೀತ ರಾಷ್ಟ್ರವನ್ನು ನಿರ್ನಾಮ ಮಾಡಿ, ಹಿಂದೂರಾಷ್ಟ್ರ ಕಟ್ಟುವ ಸಂಬಂಧ ಮಾಡುತ್ತಿರುವ ಪ್ರಯತ್ನಗಳ ಕುರಿತು ವಿದ್ವಾಂಸರು ಚರ್ಚಿಸಲಿದ್ದರು ಎಂದು ವರದಿ ಉಲ್ಲೇಖಿಸಿದೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷ ಬಿಜೆಪಿಯು ಹಿಂದೂ ರಾಷ್ಟ್ರೀಯ ಅಜೆಂಡಾವನ್ನು ಮುನ್ನಲೆಗೆ ತಂದಿದೆ. ಸುಮಾರು 20 ಕೋಟಿ ಮುಸ್ಲಿಮರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದನ್ನು ಗಾರ್ಡಿಯನ್ ಉಲ್ಲೇಖಿಸಿದೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡಲು ಹಿಂದುತ್ವವಾದಿ ಗುಂಪುಗಳು ಸಜ್ಜಾಗಿವೆ. ವಿವಿಗಳು ಹಿಂದೆ ಸರಿಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸಮ್ಮೇಳನದ ಆಯೋಜಕರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ತಮ್ಮ ಕುಟುಂಬಕ್ಕೆ ಮರಳುವುದನ್ನು ನಿಷೇಧಿಸುವ ಭಯದಿಂದ ಅಥವಾ ಭಾರತಕ್ಕೆ ಮರಳಿದಾಗ ಬಂಧಿಸುವ ಭಯದಿಂದ ಅನೇಕರು ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ. ಹತ್ತಾರು ಭಾಷಣಕಾರರು ಹಾಗೂ ಸಂಘಟನಾಕಾರರ ಕುಟುಂಬದವರಿಗೆ ಬೆದರಿಕೆ ಒಡ್ಡಲಾಗಿದೆ. ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಸಮ್ಮೇಳನದ ಅಧ್ಯಕ್ಷರಿಗೆ, ವಿಶ್ವವಿದ್ಯಾನಿಲಯಗಳಿಗೆ 10 ಲಕ್ಷಕ್ಕೂ ಹೆಚ್ಚು ಇಮೇಲ್‌ ಮಾಡಲಾಗಿದ್ದು, ಸಮ್ಮೇಳನದಿಂದ ಹಿಂದೆ ಸರಿಯುವಂತೆ ಎಚ್ಚರಿಸಲಾಗಿದೆ. ನ್ಯೂಜೆರ್ಸಿಯ ಡ್ರೂ ವಿವಿಯು ಕೆಲವೇ ನಿಮಿಷಗಳಲ್ಲಿ 30,000 ಇಮೇಲ್‌ಗಳನ್ನು ಸ್ವೀಕರಿಸಿದೆ ಮತ್ತು ವಿವಿಯ ಸರ್ವರ್‌ ಹಾನಿಯಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...