Homeಮುಖಪುಟ‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

"ಹಿಂದೂ ರಾಷ್ಟ್ರೀಯತೆ" ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದರೆ ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

- Advertisement -
- Advertisement -

“ಹಿಂದೂ ರಾಷ್ಟ್ರೀಯತೆ” ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದವರನ್ನು ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

ಸೆ.9 ರಂದು ಗಾರ್ಡಿಯನ್ ವರದಿ ಪ್ರಕಟಿಸಿದ್ದು, ಹಲವು ವಿದ್ವಾಂಸರನ್ನು ಹಿಂದೂ ವಿರೋಧಿಗಳೆಂದು ದೂಷಿಸಿ, ಅವರು ವಿಚಾರ ವಿಚಾರಸಂಕಿರಣದಿಂದ ಹಿಂದೆ ಸರಿಯುವಂತೆ ಹಿಂದುತ್ವವಾದಿ ಉಗ್ರರು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಮ್ಮೇಳನವು “ಜಾಗತಿಕ ಹಿಂದುತ್ವದ ನಿರ್ನಾಮ” ಎಂಬ ಹೆಸರಿನಲ್ಲಿದೆ. ಹಾರ್ವಾಡ್, ಸ್ಟಾಂಡ್‌ಫಾರ್ಡ್, ಪ್ರಿನ್ಸ್‌ಟನ್‌, ಕೊಲಂಬಿಯ, ಬರ್ಕ್ಲಿ, ಚಿಕಾಗೋ, ಪೆನ್ಸಿಲ್‌ವೇನಿಯ, ರುಟ್‌ಗರ್ಸ್ ಸೇರಿದಂತೆ 53ಕ್ಕೂ ಹೆಚ್ಚು ವಿವಿಗಳು ಈ ಸಮ್ಮೇಳನದ ಸಹ ಪ್ರಯೋಜಕತ್ವ ಹೊಂದಿವೆ.

ಸಮ್ಮೇಳನ ಉದ್ದೇಶವನ್ನು ಚರ್ಚಿಯಲು ಸೆ.10ರಂದು ಆಯೋಜಿಸಲಾಗಿತ್ತು. ಹಿಂದುತ್ವ ಗುಂಪುಗಳು, ಜಾತ್ಯತೀತ ರಾಷ್ಟ್ರವನ್ನು ನಿರ್ನಾಮ ಮಾಡಿ, ಹಿಂದೂರಾಷ್ಟ್ರ ಕಟ್ಟುವ ಸಂಬಂಧ ಮಾಡುತ್ತಿರುವ ಪ್ರಯತ್ನಗಳ ಕುರಿತು ವಿದ್ವಾಂಸರು ಚರ್ಚಿಸಲಿದ್ದರು ಎಂದು ವರದಿ ಉಲ್ಲೇಖಿಸಿದೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷ ಬಿಜೆಪಿಯು ಹಿಂದೂ ರಾಷ್ಟ್ರೀಯ ಅಜೆಂಡಾವನ್ನು ಮುನ್ನಲೆಗೆ ತಂದಿದೆ. ಸುಮಾರು 20 ಕೋಟಿ ಮುಸ್ಲಿಮರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದನ್ನು ಗಾರ್ಡಿಯನ್ ಉಲ್ಲೇಖಿಸಿದೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡಲು ಹಿಂದುತ್ವವಾದಿ ಗುಂಪುಗಳು ಸಜ್ಜಾಗಿವೆ. ವಿವಿಗಳು ಹಿಂದೆ ಸರಿಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸಮ್ಮೇಳನದ ಆಯೋಜಕರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ತಮ್ಮ ಕುಟುಂಬಕ್ಕೆ ಮರಳುವುದನ್ನು ನಿಷೇಧಿಸುವ ಭಯದಿಂದ ಅಥವಾ ಭಾರತಕ್ಕೆ ಮರಳಿದಾಗ ಬಂಧಿಸುವ ಭಯದಿಂದ ಅನೇಕರು ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ. ಹತ್ತಾರು ಭಾಷಣಕಾರರು ಹಾಗೂ ಸಂಘಟನಾಕಾರರ ಕುಟುಂಬದವರಿಗೆ ಬೆದರಿಕೆ ಒಡ್ಡಲಾಗಿದೆ. ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಸಮ್ಮೇಳನದ ಅಧ್ಯಕ್ಷರಿಗೆ, ವಿಶ್ವವಿದ್ಯಾನಿಲಯಗಳಿಗೆ 10 ಲಕ್ಷಕ್ಕೂ ಹೆಚ್ಚು ಇಮೇಲ್‌ ಮಾಡಲಾಗಿದ್ದು, ಸಮ್ಮೇಳನದಿಂದ ಹಿಂದೆ ಸರಿಯುವಂತೆ ಎಚ್ಚರಿಸಲಾಗಿದೆ. ನ್ಯೂಜೆರ್ಸಿಯ ಡ್ರೂ ವಿವಿಯು ಕೆಲವೇ ನಿಮಿಷಗಳಲ್ಲಿ 30,000 ಇಮೇಲ್‌ಗಳನ್ನು ಸ್ವೀಕರಿಸಿದೆ ಮತ್ತು ವಿವಿಯ ಸರ್ವರ್‌ ಹಾನಿಯಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...