Homeಕರ್ನಾಟಕಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ...

ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ

- Advertisement -
- Advertisement -

ಧರ್ಮಸ್ಥಳದ ಶವಶೋಧ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಯಲ್ಲಿರುವ ಅಧಿಕಾರಿಯೊಬ್ಬರ ವಿರುದ್ದವೇ ಗಂಭೀರ ಆರೋಪ ಕೇಳಿ ಬಂದಿದೆ.

ಎಸ್‌ಐಟಿಯ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರು ಸಾಕ್ಷಿ ದೂರುದಾರನಿಗೆ (ಭೀಮ) ಬೆದರಿಕೆ ಹಾಕಿದ್ದಾರೆ. ದೂರು ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರದಿಯಾಗಿದೆ.

ಮಂಜುನಾಥ್ ಗೌಡ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ತಮ್ಮ ಮೊಬೈಲ್ ಫೋನ್‌ ಮೂಲಕ ದೂರುದಾರನ ಹೇಳಿಕೆಯನ್ನು ರೆಕಾರ್ಡ್ ಮಾಡುವಾಗ, ದೂರು ಹಿಂಪಡೆಯಲು ಇಚ್ಛಿಸಿರುವುದಾಗಿ ಸುಳ್ಳು ಹೇಳುವಂತೆ ಆತನಿಗೆ ಒತ್ತಾಯಿಸಿದ ಆರೋಪವಿದೆ ಎಂದು blrpost.com ವರದಿ ಮಾಡಿದೆ.

ದೂರುದಾರನ ಪರ ವಕೀಲರು ಈ ಬಗ್ಗೆ ಎಸ್‌ಐಟಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಬೆಳವಣಿಗೆಯು ಎಸ್‌ಐಟಿಯಲ್ಲಿರುವ ಕೆಳ ಹಂತದ ಅಧಿಕಾರಿಗಳ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು blrpost.com ಹೇಳಿದೆ.

ಈ ಮಾಹಿತಿಯನ್ನು ಗೃಹ ಇಲಾಖೆಯ ಅಧಿಕಾರಿಯೊಬ್ಬರು ನಮ್ಮ ಜೊತೆ ಹಂಚಿಕೊಂಡಿದ್ದು, ಅವರು ದೂರಿನ ವಿಷಯವನ್ನು ಸಹ ಒದಗಿಸಿದ್ದಾರೆ. ಅಧಿಕಾರಿಯ ಪ್ರಕಾರ, ವಕೀಲರಾದ ಅನನ್ಯಾ ಗೌಡ ಅವರು ಮಂಜುನಾಥ ಗೌಡ ಅವರನ್ನು ಎಸ್‌ಐಟಿಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ ಎಂದು blrpost.com ತಿಳಿಸಿದೆ.

ವಕೀಲೆ ಅನನ್ಯಾ ಗೌಡ ಅವರು ಎಸ್‌ಐಟಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ ಈಮೇಲ್ ಸ್ಕ್ರೀನ್ ಶಾಟ್ ಮತ್ತು ವಿಯಷವನ್ನು blrpost.com ತನ್ನ ವರದಿಯಲ್ಲಿ ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಪೊಲೀಸ್ ಅಧಿಕಾರಿ ಮಂಜುನಾಥ್ ಗೌಡ ಅವರ ವಿರುದ್ದ ಆರೋಪದ ಬಗ್ಗೆ ಚರ್ಚೆಯಾಗುತ್ತಿದೆ.

ಮಂಜುನಾಥ್ ಗೌಡ ಅವರು ಶವ ಶೋಧದ ವೇಳೆ ಸಿಕ್ಕ ಅವಶೇಷಗಳ ಫೋಟೋ ತೆಗೆದು ಪ್ರಭಾವಿ ಕುಟುಂಬಕ್ಕೆ ಕಳುಹಿಸಿದ್ದಾರೆ ಎಂದು ಹೇಳಲಾಗ್ತಿದೆ. ಶವಶೋಧದ ವೇಳೆ ಸ್ಥಳದಲ್ಲಿದ್ದ ಮಂಜುನಾಥ್ ಗೌಡ ಸಂಪೂರ್ಣ ಪ್ರಕ್ರಿಯೆಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸುದ್ದಿ ವಾಹಿನಿಯೊಂದರ ಸ್ಕ್ರೀನ್ ಶಾಟ್ ಹಂಚಿಕೊಳ್ಳಲಾಗ್ತಿದೆ.

ಹಾಗಾಗಿ, ಶವ ಶೋಧದ ವೇಳೆ ದೂರುದಾರನ ಪರ ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರು ಸ್ಥಳದಲ್ಲಿರಬೇಕು ಎಂದು ಹೋರಾಟಗಾರರು ಬೇಡಿಕೆ ಇಟ್ಟಿದ್ದಾರೆ.

ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...