Homeಸಿನಿಮಾಕ್ರೀಡೆವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಈ ಸಂಬಂಧ ದೆಹಲಿ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ

- Advertisement -
- Advertisement -

ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಸೋಲು ಕಂಡಿದ್ದಕ್ಕೆ ಆಟಗಾರ ಮೊಹಮ್ಮದ್ ಶಮಿಯನ್ನು ಹಲವರು ಬೆಟ್ಟು ಮಾಡಿ ವಾಗ್ದಾಳಿ ನಡೆಸಿದ್ದರು. ಸಹ ಆಟಗಾರನ ಬೆಂಬಲಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಿಂತಿದ್ದರು. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಳಿಕ ವಿರಾಟ್ ಕೊಹ್ಲಿ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ್ದ ಹಲವರು, ಕೊಹ್ಲಿಯ ಒಂಬತ್ತು ತಿಂಗಳ ಮಗಳ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಒಡ್ಡಿದರು. ಘಟನೆ ಸಂಬಂಧ ದೆಹಲಿಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜೊತೆಗೆ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದು, ಕೊಹ್ಲಿ ಮಗಳ ವಿರುದ್ಧ ಭಯಾನಕ ಬೆದರಿಕೆ ಕುರಿತು ಕೈಗೊಂಡ ತನಿಖೆ, ಆರೋಪಿಯನ್ನು ಬಂಧಿಸಲು ದೆಹಲಿ ಪೊಲೀಸರು ತೆಗೆದುಕೊಂಡ ಕ್ರಮಗಳ ಬಗ್ಗೆ ನವೆಂಬರ್ 8ರೊಳಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರಾಟ್ ಕೊಹ್ಲಿಗೆ ಬೆಂಬಲ ನೀಡಿದ್ದಾರೆ.

“ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ ಏಕೆಂದರೆ ಯಾರೂ ಅವರಿಗೆ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ” ಎಂದು ರಾಹುಲ್ ಗಾಂಧಿ ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇನ್ನು ಈ ಅತ್ಯಾಚಾರದ ಬೆದರಿಕೆಯನ್ನು ಪಾಕಿಸ್ತಾನದ ವ್ಯಕ್ತಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಹಲವು ಮಂದಿ ಈ ಸುಳ್ಳು ಸುದ್ದಿಯನ್ನು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಮಾಡುತ್ತಿದ್ದಾರೆ.

ಆಲ್ಟ್ ನ್ಯೂಸ್ ವೆಬ್‌ಸೈಟ್ ಈ ಬಗ್ಗೆ ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆದರಿಕೆ ಹಾಕಿರುವ ವ್ಯಕ್ತಿ ಪಾಕಿಸ್ತಾನದವರಲ್ಲ, ಭಾರತದವರು ಎಂದು ಕಂಡು ಹಿಡಿದಿದೆ.

ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ವಿರಾಟ್ ಕೊಹ್ಲಿ ದನಿಯೆತ್ತಿದ್ದರು. “ಧರ್ಮದ ಆಧಾರದಲ್ಲಿ ಯಾರ ಮೇಲಾದರೂ ದಾಳಿ ಮಾಡಿದರೆ ಮನುಷ್ಯನಾಗಿ ಮಾಡಬಹುದಾದ ಅತ್ಯಂತ ಕರುಣಾಜನಕ ವಿಷಯ. ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ” ಎಂದು ವಿರಾಟ್ ಕೊಹ್ಲಿ ಕಿಡಿಕಾರಿದ್ದರು.


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...