Homeಸಿನಿಮಾಕ್ರೀಡೆವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಈ ಸಂಬಂಧ ದೆಹಲಿ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ

- Advertisement -
- Advertisement -

ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ಸೋಲು ಕಂಡಿದ್ದಕ್ಕೆ ಆಟಗಾರ ಮೊಹಮ್ಮದ್ ಶಮಿಯನ್ನು ಹಲವರು ಬೆಟ್ಟು ಮಾಡಿ ವಾಗ್ದಾಳಿ ನಡೆಸಿದ್ದರು. ಸಹ ಆಟಗಾರನ ಬೆಂಬಲಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಿಂತಿದ್ದರು. ಇದು ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಳಿಕ ವಿರಾಟ್ ಕೊಹ್ಲಿ ವಿರುದ್ಧ ನಿಂದನಾತ್ಮಕವಾಗಿ ಮಾತನಾಡಿದ್ದ ಹಲವರು, ಕೊಹ್ಲಿಯ ಒಂಬತ್ತು ತಿಂಗಳ ಮಗಳ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಒಡ್ಡಿದರು. ಘಟನೆ ಸಂಬಂಧ ದೆಹಲಿಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜೊತೆಗೆ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದು, ಕೊಹ್ಲಿ ಮಗಳ ವಿರುದ್ಧ ಭಯಾನಕ ಬೆದರಿಕೆ ಕುರಿತು ಕೈಗೊಂಡ ತನಿಖೆ, ಆರೋಪಿಯನ್ನು ಬಂಧಿಸಲು ದೆಹಲಿ ಪೊಲೀಸರು ತೆಗೆದುಕೊಂಡ ಕ್ರಮಗಳ ಬಗ್ಗೆ ನವೆಂಬರ್ 8ರೊಳಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರಾಟ್ ಕೊಹ್ಲಿಗೆ ಬೆಂಬಲ ನೀಡಿದ್ದಾರೆ.

“ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ ಏಕೆಂದರೆ ಯಾರೂ ಅವರಿಗೆ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ” ಎಂದು ರಾಹುಲ್ ಗಾಂಧಿ ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇನ್ನು ಈ ಅತ್ಯಾಚಾರದ ಬೆದರಿಕೆಯನ್ನು ಪಾಕಿಸ್ತಾನದ ವ್ಯಕ್ತಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಹಲವು ಮಂದಿ ಈ ಸುಳ್ಳು ಸುದ್ದಿಯನ್ನು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಮಾಡುತ್ತಿದ್ದಾರೆ.

ಆಲ್ಟ್ ನ್ಯೂಸ್ ವೆಬ್‌ಸೈಟ್ ಈ ಬಗ್ಗೆ ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆದರಿಕೆ ಹಾಕಿರುವ ವ್ಯಕ್ತಿ ಪಾಕಿಸ್ತಾನದವರಲ್ಲ, ಭಾರತದವರು ಎಂದು ಕಂಡು ಹಿಡಿದಿದೆ.

ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ವಿರಾಟ್ ಕೊಹ್ಲಿ ದನಿಯೆತ್ತಿದ್ದರು. “ಧರ್ಮದ ಆಧಾರದಲ್ಲಿ ಯಾರ ಮೇಲಾದರೂ ದಾಳಿ ಮಾಡಿದರೆ ಮನುಷ್ಯನಾಗಿ ಮಾಡಬಹುದಾದ ಅತ್ಯಂತ ಕರುಣಾಜನಕ ವಿಷಯ. ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ” ಎಂದು ವಿರಾಟ್ ಕೊಹ್ಲಿ ಕಿಡಿಕಾರಿದ್ದರು.


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...