Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...