Homeಕರ್ನಾಟಕಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು...

ಒಂದೇ ಕ್ಷೇತ್ರದ ಈ ಮೂರು ಅಭ್ಯರ್ಥಿಗಳ ಆಸ್ತಿ 2000 ಕೋಟಿಗೂ ಹೆಚ್ಚು. ಆ ಕ್ಷೇತ್ರ ಯಾವುದು ಗೊತ್ತೇ?

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ.

- Advertisement -
- Advertisement -

ನಿನ್ನೆ ತಾನೇ ಹೊಸಕೋಟೆಯ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ವಿವರ ಹೊರಬಿದ್ದಿತ್ತು. ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ಅದು ಬೆಚ್ಚಿ ಬೀಳಿಸಿತ್ತು. ಏಕೆಂದರೆ ನಾಗರಾಜ್ ಮತ್ತು ಅವರ ಪತ್ನಿ ಶಾಂತಾ ಅವರ ಒಟ್ಟು ಆಸ್ತಿ 1201.50 ಕೋಟಿಗಳಾಗಿತ್ತು. ಅಷ್ಟೇ ಅಲ್ಲದೇ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆಗೆ ಮುಖ ಮಾಡಿ ಸರ್ಕಾರ ಬೀಳಲು ಕಾರಣವಾದ 5 ದಿನಗಳಲ್ಲಿ ಅವರ ವಿವಿಧ ಬ್ಯಾಂಕ್ ಖಾತೆಗಳಿಗೆ 48 ಕೋಟಿ ರೂ ಹಣ ಬಂದಿತ್ತು. ಇದು ವಿವರವಾಗಿ ಎಲ್ಲಾ ಕಡೆ ವರದಿಯಾಗಿತ್ತು.

ಇದೀಗ ಅದೇ ರೀತಿಯ ಇನ್ನೊಂದು ಸುದ್ದಿ ಬಂದಿದೆ.

ಕ್ಷೇತ್ರದ ಮೂರೂ ಪ್ರಮುಖ ಅಭ್ಯರ್ಥಿಗಳ ಆಸ್ತಿಯ ಮೌಲ್ಯ ತಲಾ ನೂರು ಕೋಟಿಗೂ ಹೆಚ್ಚಿರುವ ವರ್ತಮಾನ ಬಹಿರಂಗವಾಗಿದೆ. ಅಷ್ಟೇ ಅಲ್ಲ ಮೂರು ಅಭ್ಯರ್ಥಿಗಳ ಒಟ್ಟು ಆಸ್ತಿ 2000 ಕೋಟಿಗೂ ಹೆಚ್ಚು  ಅದು ಹೊಸಕೋಟೆ ಕ್ಷೇತ್ರ. ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರ ಆಸ್ತಿಯ ಪ್ರಮಾಣ ಮೇಲಿನಂತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿಯವರದ್ದೂ ಕಡಿಮೆಯೇನಿಲ್ಲ. ಅವರು ಮತ್ತು ಅವರ ಪತಿ ಬೈರತಿ ಸುರೇಶ್‌ರವರ ಆಸ್ತಿ 424 ಕೋಟಿ ರೂ ಮತ್ತು 407 ಕೋಟಿ ರೂ. ಆಗಿದೆ. ಅಂದರೆ ಒಟ್ಟು 831 ಕೋಟಿ ರೂ.ಗಳ ಆಸ್ತಿ ಅವರದ್ದಾಗಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಹಾಲಿ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಬೈರತಿ ಸುರೇಶ್ ಅದಕ್ಕೆ ಮುಂಚೆ ವಿಧಾನಪರಿಷತ್ ಸದಸ್ಯರಾಗಿದ್ದರು. ಅದೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಶಾಸಕರ ಮತಗಳನ್ನು ಕೊಂಡು ಎಂಎಲ್‌ಸಿ ಆದರು ಎಂಬ ಆರೋಪ ಅವರ ಮೇಲಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಬೈರತಿ ಸುರೇಶ್ ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಘೋಷಿಸಿಕೊಂಡಿರುವ ಶಾಸಕರಲ್ಲಿ ಒಬ್ಬರಾಗಿದ್ದಾರೆ.

ಇನ್ನು ಮೂರನೆಯ ಅಭ್ಯರ್ಥಿ ಶರತ್ ಬಚ್ಚೇಗೌಡ. ಕಳೆದ ಸಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಸೋತಿದ್ದ ಅವರು ಈಗ ಪಕ್ಷೇತರ ಅಭ್ಯರ್ಥಿ. ಜೆಡಿಎಸ್ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದೆ. ಅವರು ಮತ್ತು ಅವರ ಪತ್ನಿ ಪ್ರತಿಭಾ ಅವರ ಒಟ್ಟು ಆಸ್ತಿ ಮೌಲ್ಯ 138 ಕೋಟಿ ರೂ.ಗಳಾಗಿದೆ.

ಬೆಂಗಳೂರಿನ ಸುತ್ತಮುತ್ತಲಿರುವ ಶಾಸಕ ಸ್ಥಾನದ ಅಭ್ಯರ್ಥಿಗಳು ಇಷ್ಟೊಂದು ಪ್ರಮಾಣದ ಆಸ್ತಿ ಗಳಿಸಲು ಕಾರಣವಿದೆ. ರಾಜಕೀಯ ಬಲದಿಂದ ಹೆಚ್ಚೆಚ್ಚು ಭೂ ವ್ಯವಹಾರವನ್ನು ಇವರುಗಳು ಮಾಡುತ್ತಾರೆ. ಕಳೆದ 30 ವರ್ಷಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಲ್ಲಿ ಭೂಮಿಯ ಬೆಲೆ ಏರುತ್ತಲೇ ಹೋಗಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಇವರುಗಳ ಆಸ್ತಿಯೂ ಹೆಚ್ಚುತ್ತಿದೆ.

ಈಗ ನೂರಾರು ಕೋಟಿ ರೂ.ಗಳ ಆಸ್ತಿ ಹೊಂದಿರುವ ಮೂವರು ಅಭ್ಯರ್ಥಿಗಳ ಜಿದ್ದಾಜಿದ್ದಿ ಹೊಸಕೋಟೆಯಲ್ಲಿ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಯಾವ ರೀತಿಯಲ್ಲಿಯೂ ಮೌಲ್ಯಗಳ ಸ್ಪರ್ಧೆ ಇಲ್ಲಿದೆ ಎಂದು ಹೇಳಲಾಗದು. ಮೂವರು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಪಕ್ಷಾಂತರ ಅಥವಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರೇ ಆಗಿದ್ದಾರೆ. ಆ ಪಕ್ಷಾಂತರಕ್ಕೆ ವೈಯಕ್ತಿಕ ಹಿತಾಸಕ್ತಿಯಲ್ಲದೇ ಬೇರಾವ ಸೈದ್ಧಾಂತಿಕ ಕಾರಣಗಳೂ ಇರಲಿಲ್ಲ.

ಹೆಚ್ಚು ಆಸ್ತಿ ಅಥವಾ ಹಣ ಇದ್ದವರು ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವ ಕಾನೂನೂ ಇಲ್ಲ. ಆದರೆ, ಚುನಾವಣೆಗೆ ಮುಂಚೆ ಅಧಿಕೃತವಾಗಿ ಮತ್ತು ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಅನಧಿಕೃತವಾಗಿ ಇಂತಹವರು ಕೋಟಿಗಟ್ಟಲೆ ಹಣ ಚೆಲ್ಲಿ ಚುನಾವಣೆ ನಡೆಸುತ್ತಾರೆ. ಆಗ ಪ್ರಜಾಪ್ರಭುತ್ವವೂ ಬೀದಿಯಲ್ಲಿ ಚೆಲ್ಲಾಡಿ ಹೋಗುತ್ತದೆ. ಅಂತಹ ದುರಂತಕ್ಕೆ ಸಾಕ್ಷಿಯಾಗಿರುವುದು ಹೊಸಕೋಟೆ ಮಾತ್ರವಲ್ಲ. ಬೆಂಗಳೂರಿನ ಯಶವಂತಪುರ ಕ್ಷೇತ್ರ, ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಅಭ್ಯರ್ಥಿಗಳ ಆಸ್ತಿ ವಿವರಗಳು ಹೊರಬಿದ್ದಾಗ ಅದಕ್ಕೆ ಇನ್ನಷ್ಟು ಸಾಕ್ಷಿ ದೊರೆಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿವೇಶನ ಮಾಡಿ ಹಂಚುವುದು, ಮಾರುವುದನ್ನು ನೆಲದೊಡೆಯರ ಹಿಡಿತಕ್ಕೆ ಬಿಡದೆ ಆಳ್ವಕೆ ತಾನೇ ಹಿಡಿತದಲ್ಲಿಟ್ಟು ಕೊಳ್ಳುವಲ್ಲಿ ಸೋತ ಪರಿಣಾಮ!

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...